
ಬೆಂಗಳೂರು, [ಸೆ.19]: ಪ್ರತಿಪಕ್ಷದ ನಾಯಕರ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್ನಲ್ಲಿ ತೀವ್ರ ಪೈಪೋಟಿ ನಡೆದಿದೆ. ಇದಕ್ಕೆ ಹೈಕಮಾಂಡ್ ಬಳಿ ಭರ್ಜರಿ ಲಾಬಿ ಶುರುವಾಗಿದೆ.
ಇದರ ಮಧ್ಯೆ ಸಿಎಂ ಅವರು ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕ ಎಂದು ಟ್ವೀಟ್ ಮಾಡಿ ಎಡವಟ್ಟು ಮಾಡಿಕೊಂಡಿದ್ದಾರೆ.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾ ಗೂ ದಲಿತ ಉದ್ದಿಮೆದಾರರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸವಲತ್ತುಗಳ ಅರಿವು ಮೂಡಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು. ಸಚಿವರಾದ ಗೋವಿಂದ ಕಾರಜೋಳ, ಜಗದೀಶ್ ಶೆಟ್ಟರ್ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ದರು ಎಂದು CM Of Karnataka ಖಾತೆಯಿಂದ ಟ್ವೀಟ್ ಮಾಡಲಾಗಿತ್ತು. ಬಳಿಕ ಆ ಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ.
ಇಂದು [ಗುರುವಾರ] ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯಗಳ ಆರ್ಥಿಕ ಅಭಿವೃದ್ಧಿ ಅರಿವು ಕುರಿತ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಮುಖಾಮುಖಿಗೆ ಸಾಕ್ಷಿಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.