ಬೆಂಗಳೂರು [ಜು.28] : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುದಿನ 4ನೇ ಶನಿವಾರವಾದ ಕಾರಣ ಸರ್ಕಾರಿ ರಜೆ ಇದ್ದರೂ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧಕ್ಕೆ ತೆರಳಿ ರಾಜ್ಯದ ಮೂಲಸೌಕರ್ಯ ಯೋಜನೆಗಳ ಬಗ್ಗೆ ಪರಿಶೀಲನಾ ಸಭೆ ನಡೆಸಿದರು.
ಮಂಡ್ಯ ಪ್ರವಾಸ ಮುಗಿಸಿ ವಾಪಸಾದ ಯಡಿಯೂರಪ್ಪ ಅವರು ವಿಧಾನಸೌಧಕ್ಕೆ ತೆರಳಿ ಮೊದಲಿಗೆ ಸೋಮವಾರ ವಿಧಾನಸಭೆಯಲ್ಲಿ ಮಂಡಿಸಬೇಕಾಗಿರುವ ಹಣಕಾಸು ವಿಧೇಯಕ ಕುರಿತು ಕೆಲಕಾಲ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ನಂತರ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದ ಪ್ರಮುಖ ಮೂಲಸೌಕರ್ಯ ಯೋಜನೆಗಳ ಬಗ್ಗೆ ಪ್ರತ್ಯೇಕವಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು, ದೀರ್ಘ ಕಾಲದಿಂದ ಬಾಕಿ ಉಳಿದಿರುವ ಯೋಜನೆಗಳ ಬಗ್ಗೆ ತಮ್ಮ ಮುಂದಿನ ದೆಹಲಿ ಭೇಟಿ ವೇಳೆ ಕೇಂದ್ರ ಸರ್ಕಾರದ ಸಂಬಂಧಪಟ್ಟಇಲಾಖೆಗಳ ಸಚಿವರ ಗಮನಕ್ಕೆ ತರಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ನಮ್ಮ ಮೆಟ್ರೋ, ಕಲಬುರಗಿ ವಿಮಾನ ನಿಲ್ದಾಣ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.