ಸಿದ್ದರಾಮಯ್ಯ ವಿರುದ್ಧ ಎಚ್'ಡಿಕೆ ದೂರು..!

Published : Jun 18, 2018, 10:47 PM IST
ಸಿದ್ದರಾಮಯ್ಯ ವಿರುದ್ಧ ಎಚ್'ಡಿಕೆ ದೂರು..!

ಸಾರಾಂಶ

ಸರ್ಕಾರ ರಚನೆ ವೇಳೆ ನೀಡಿದ್ದ ಬೆಂಬಲವನ್ನು ಸರ್ಕಾರ ನಡೆಸುವಾಗ ನೀಡುತ್ತಿಲ್ಲ. ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿ, ರೈತರ ಸಾಲಮನ್ನಾ, ಹೊಸ ಬಜೆಟ್, ಅಭಿವೃದ್ದಿ ಯೋಜನೆಗಳ ಬಗ್ಗೆ ಎಚ್’ಡಿಕೆ ಮಾತುಗಳನ್ನು ಆಲಿಸಿದ ರಾಹುಲ್ ಗಾಂಧಿ, ಸರ್ಕಾರ ನಡೆಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ನವದೆಹಲಿ[ಜೂ.18]: ಬಜೆಟ್ ಸೇರಿದಂತೆ ಕೆಲವೊಂದು ವಿಚಾರಗಳಿಗೆ ಸಿದ್ದರಾಮಯ್ಯ ಅನಗತ್ಯ ಅಡ್ಡಿ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎದುರು ಮುಖ್ಯಮಂತ್ರಿ ಎಚ್’ಡಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

ಸರ್ಕಾರ ರಚನೆ ವೇಳೆ ನೀಡಿದ್ದ ಬೆಂಬಲವನ್ನು ಸರ್ಕಾರ ನಡೆಸುವಾಗ ನೀಡುತ್ತಿಲ್ಲ. ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿ, ರೈತರ ಸಾಲಮನ್ನಾ, ಹೊಸ ಬಜೆಟ್, ಅಭಿವೃದ್ದಿ ಯೋಜನೆಗಳ ಬಗ್ಗೆ ಎಚ್’ಡಿಕೆ ಮಾತುಗಳನ್ನು ಆಲಿಸಿದ ರಾಹುಲ್ ಗಾಂಧಿ, ಸರ್ಕಾರ ನಡೆಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಹೊಸಬಜೆಟ್ ಮಂಡನೆ ಮಾಡಲು ಯಾವುದೇ ಅಭ್ಯಂತರವಿಲ್ಲ ಎಂಬ ಅಭಯವನ್ನು ರಾಹುಲ್ ಗಾಂಧಿ ಎಚ್’ಡಿಕೆಗೆ ನೀಡಿದ್ದಾರೆ. ಬಜೆಟ್ ಮಂಡನೆ ಅಗತ್ಯವಿಲ್ಲ ಎಂಬ ಸಿದ್ದರಾಮಯ್ಯ ಅವರ ವಾದವನ್ನು ಕಾಂಗ್ರೆಸ್ ಹೈಕಮಾಂಡ್ ತಳ್ಳಿಹಾಕಿದೆ. ಸಿದ್ದರಾಮಯ್ಯ ಹೊರತುಪಡಿಸಿ ಕಾಂಗ್ರೆಸ್’ನ ಇತರ ನಾಯಕರಾದ ಡಿಸಿಎಂ ಡಾ. ಜಿ ಪರಮೇಶ್ವರ್, ಡಿ.ಕೆ ಶಿವಕುಮಾರ್ ಬಜೆಟ್ ಮಂಡಿಸಲು ಒಪ್ಪಿಗೆ ಸೂಚಿಸಿದ್ದರು. ಇದೀಗ ಹೈಕಮಾಂಡ್ ಕೂಡಾ ಸಮ್ಮತಿಯ ಮುದ್ರೆಯೊತ್ತಿರುವುದು ಕುಮಾರಸ್ವಾಮಿ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಇನ್ನು ಜುಲೈನ ಮೊದಲ ವಾರದಲ್ಲಿ ಎಚ್’ಡಿ ಕುಮಾರಸ್ವಾಮಿ ಪೂರ್ಣಪ್ರಮಾಣದ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Breaking ಸ್ಮೋಕ್ ಬಾಂಬ್ ಎಸೆದು ಸಿಕ್ಕ ಸಿಕ್ಕವರಿಗೆ ಚಾಕು ಇರಿದ ದುಷ್ಕರ್ಮಿ, 3 ಸಾವು, ಐವರು ಗಂಭೀರ
ಶಕ್ತಿಯಡಿ ಸರ್ಕಾರದಿಂದ ಸಾರಿಗೆ ನಿಗಮಕ್ಕೆ ₹4000 ಕೋಟಿ ಬಾಕಿ: ಸಚಿವ ರಾಮಲಿಂಗಾರೆಡ್ಡಿ