
ಹಾಸನ[ಫೆ.18] ಲೋಕಸಭಾ ಚುನಾವಣೆಗೆ ಮೈತ್ರಿ ಪಕ್ಷಗಳ ಸೀಟು ಹಂಚಿಕೆ ವಿಚಾರ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ನಾಯಕರಿಗೆ ಬಿಟ್ಟ ವಿಚಾರ. ಅಭಿವೃದ್ಧಿ ಕಡೆಗೆ ಗಮನ ನೀಡೋದು ನನ್ನ ಕರ್ತವ್ಯ. ಈ ಬಗ್ಗೆ ನಾನು ಯಾರೊಂದಿಗೂ ಚರ್ಚೆ ಮಾಡಿಲ್ಲ. ಕಾಂಗ್ರೆಸ್ ದೊಡ್ಡ ಪಕ್ಷ ಅವರು ಮೊದಲು ತೀರ್ಮಾನ ಮಾಡಬೇಕು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಹಾಸನದಲ್ಲಿ ಪ್ರಜ್ವಲ್ ಸ್ಪರ್ಧೆ ಮಾಡಿದ್ರೆ ಬೆಂಬಲ ಇಲ್ಲ ಎಂಬ ಎ. ಮಂಜು ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದ ಕುಮಾರಸ್ವಾಮಿ, ನಮಗೆ ಯಾರು ಬೆಂಬಲ ಕೊಡ್ತಾರೆ ಅನ್ನೋದು ಮುಖ್ಯವಲ್ಲ. ತೀರ್ಮಾನ ಜಿಲ್ಲೆಯ ಮತದಾರರಿಗೆ ಬಿಟ್ಟದ್ದು. ಯಾರು ಏನು ಹೇಳಿಕೆ ಕೊಟ್ಟರೂ ನನಗೆ ಅಪ್ರಸ್ತುತ ಎಂದರು.
ಹಾಸನ ದೋಸ್ತಿ-ಕುಸ್ತಿ: 'ದೇವೇಗೌಡ್ರು ಓಕೆ, ಪ್ರಜ್ವಲ್ ಸ್ಪರ್ಧಿಸಿದ್ರೆ ಬೆಂಬಲ ಇಲ್ಲ'
ಜಿಲ್ಲೆಯ ಜನತೆ ನಮ್ಮ ಪಕ್ಷದಿಂದ ಹಲವರನ್ನು ಬೆಳೆಸಿದ್ದಾರೆ. ದೇವೇಗೌಡರ ನಾಯಕತ್ವಕ್ಕೆ ಬೆಂಬಲ ನೀಡಿದ್ದಾರೆ ಎನ್ನುವ ಮೂಲಕ ಪ್ರಜ್ವಲ್ ರೇವಣ್ಣ ಸ್ಪರ್ಧೆ ಖಚಿತ ಪಡಿಸುವ ಮಾತನ್ನಾಡಿದರು.
ಈ ಸರಕಾರ ಹಾಸನ ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ದೇವೇಗೌಡರ ಮಕ್ಕಳಾಗಿ ಹುಟ್ಟಿ ನಾಡಿನ ಸರ್ವತೋಮುಖ ಅಭಿವೃದ್ಧಿಯ ಸಂಕಲ್ಪ ಮಾಡುತ್ತೇವೆ. ಸಮ್ಮಿಶ್ರ ಸರಕಾರ ಉತ್ತರ ಕರ್ನಾಟಕದಲ್ಲಿಯೂ ಕೈಗಾರಿಕೆ ಸ್ಥಾಪನೆಗೆ ಮುಂದಾಗಿದೆ. ಸಾಲಮನ್ನಾ ರೈತರಿಗೆ ತಾತ್ಕಾಲಿಕ ಪರಿಹಾರ ಎಂಬುದು ನನಗೆ ಗೊತ್ತು. ರಾಷ್ಟ್ರಕ್ಕೆ ಮಾದರಿಯಾಗಿ ಸಾಲ ಮನ್ನಾ ಮಾಡಲಾಗಿದೆ. ಮುಂದಿನ ಡಿಸೆಂಬರ್ ವೇಳೆಗೆ ಎಲ್ಲಾ ರೀತಿಯ ಸಾಲ ಮನ್ನಾ ಆಗಲಿದೆ. ನನ್ನ ತಂದೆ ತಾಯಿಯ ಭಕ್ತಿ ನಮ್ಮನ್ನು ಇಲ್ಲಿಗೆ ತಂದು ನಿಲ್ಲಿಸಿದೆ ಎಂದರು.
ಐಐಟಿಗೆ ಸರಿ ಸಮಾನವಾಗಿ ಜಿಲ್ಲೆಗೆ ವಿದ್ಯಾಕೇಂದ್ರ ತರಲು ಚಿಂತಿಸಿದ್ದೇವೆ. ನಾವು ದಬ್ಬಾಳಿಕೆ ಮಾಡಿ ರಾಜಕೀಯ ಮಾಡಿಲ್ಲ, ಮಾಡಲ್ಲ. ನಿಮ್ಮ ಪ್ರೀತಿಯಿಂದ ರಾಜಕೀಯ ಮಾಡುತ್ತೇವೆ ಎಂದು ಹೆಸರು ಹೇಳದೆ ಬಿಜೆಪಿ ಶಾಸಕ ಪ್ರೀತಂ ಗೌಡ ಮೇಲೆ ಕಿಡಿ ಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.