
ಶೃಂಗೇರಿ[ಡಿ.06] ಎಲ್ಲಾ ಒಳ್ಳೆಯ ಕಾರ್ಯಕ್ಕೂ ಗುರುಗಳ ಆಶೀರ್ವಾದ ಇರಬೇಕು. ಮಗ ನಿಖಲ್ ಕುಮಾರಸ್ವಾಮಿ ಮದುವೆ ವಿಷಯದ ಬಗ್ಗೆಯೂ ಚರ್ಚೆ ಮಾಡಲಾಗುವುದು ಎಂದು ಸಿಎಂ ಕುಮಾರಸ್ವಾಮಿ ಶೃಂಗೇರಿಯಲ್ಲಿ ಹೇಳಿದ್ದಾರೆ.
ಭೇಟಿಯಲ್ಲಿ ಮದುವೆ ವಿಚಾರಕ್ಕೂ ಗುರುಗಳ ಆಶೀರ್ವಾದ ಪಡೆಯುವ ಉದ್ದೇಶ ಇದೆ. ಗುರುಗಳ ಅರ್ಶಿವಾದ ಶಾರದಾಂಬೆ ದರ್ಶನ ಪಡೆಯಲು ಬಂದಿದ್ದೇನೆ. ಶೃಂಗೇರಿ ಕ್ಷೇತ್ರಕ್ಕೆ ಬಂದು ಶಾರದಾಂಬೆ ದರ್ಶನ ಪಡೆದು ಗುರುಗಳ ಆರ್ಶಿವಾದ ಪಡೆಯುವಾಗ ಹಲವಾರು ರೀತಿಯ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ ಎಂದು ಹೇಳಿದರು.
ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಸಿಎಂ ಕುಮಾರಸ್ವಾಮಿ ಮಾಸ್ಟರ್ ಪ್ಲ್ಯಾನ್
ನಾವು ಕದ್ದುಮುಚ್ಚಿ ವಾಮಚಾರ ಯಾಗ ಮಾಡಿಸೋ ಪ್ರಶ್ನೆ ಇಲ್ಲ ಎಂದು ಕೇರಳಕ್ಕೆ ತೆರಳಿರುವ ಯಡಿಯೂರಪ್ಪಗೆ ಟಾಂಗ್ ನೀಡಿದ ಕುಮಾರಸ್ವಾಮಿ ದೇವರನ್ನು ನಂಬಿದ್ದೇವೆ ದೇವರ ಪ್ರಾರ್ಥನೆ ಮಾಡುತ್ತೇವೆ. ಅಧೀವೇಶನ ಸುಸೂತ್ರವಾಗಿ ನಡೆಯಬೇಕು ಹಾಹಾಗಿ ತಾಯಿಯ ಆರ್ಶಿವಾದ ಪಡೆಯಲು ಬಂದಿದ್ದೇನೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಡಿಸೆಂಬರ್ 10 ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಸಿನಿಮಾ ನಾಯಕರಾಗಿಯೂ ಗುರುತಿಸಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರ ವಿವಾಹಕ್ಕೆ ಸಂಬಂಧಿಸಿ ಸುದ್ದಿಗಳು ಹರಿದಾಡಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.