ಪರೀಕ್ಷೆ ಬರೆಯಲು ವಂಚಿತರಾದ ಅಭ್ಯರ್ಥಿಗಳಿಗೆ ನೆರವಾದ ಸಿಎಂ

Published : Aug 05, 2018, 02:57 PM IST
ಪರೀಕ್ಷೆ ಬರೆಯಲು ವಂಚಿತರಾದ ಅಭ್ಯರ್ಥಿಗಳಿಗೆ ನೆರವಾದ ಸಿಎಂ

ಸಾರಾಂಶ

ಹುಬ್ಬಳ್ಳಿಯಲ್ಲಿ ರೈಲು ವಿಳಂಬವಾದ ಕಾರಣ ಕೆಲ ಅಭ್ಯರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿತ್ತು. 

ಹುಬ್ಬಳ್ಳಿ[ಆ.05]: ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ವಿಳಂಬವಾಗಿ ಸಶಸ್ತ್ರ ಮೀಸಲು ಪಡೆ ನೇಮಕಾತಿ ಪರೀಕ್ಷೆ ಬರೆಯಲಾಗದ ಅಭ್ಯರ್ಥಿಗಳಿಗೆ ಇನ್ನೊಂದು ಅವಕಾಶ ಒದಗಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. 

ಹುಬ್ಬಳ್ಳಿಯಲ್ಲಿ ರೈಲು ವಿಳಂಬವಾದ ಕಾರಣ ಕೆಲ ಅಭ್ಯರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿತ್ತು. ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ನಡೆಸುವ ಬಗ್ಗೆ ಅವಕಾಶ ಕಲ್ಪಿಸಲು ಎಡಿಜಿಪಿ ಅವರಿಗೆ ಸೂಚನೆ ನೀಡಿ, ಅಭ್ಯರ್ಥಿಗಳು ಯಾರೂ ಗಾಬರಿಯಾಗಬೇಕಿಲ್ಲ. ಶೀಘ್ರವೇ ಪರೀಕ್ಷೆಯ ಮುಂದಿನ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಿದರು. 

ರೈಲು ವಿಳಂಬವಾದ ಕುರಿತು ರೈಲ್ವೆ ಸಚಿವರ ಗಮನ ಸೆಳೆದು ಇಂತಹ ಅಚಾತುರ್ಯಗಳಾಗದಂತೆ ಕ್ರಮ ವಹಿಸಲು ಕೊರಲಾಗುವುದು. ಹುಬ್ಬಳ್ಳಿಯಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸುವ ಕುರಿತು ಸಹ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!