
ಬೆಂಗಳೂರು : ಸಮ್ಮಿಶ್ರ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಮುನಿಸಿಕೊಂಡಿರುವ ಶಾಸಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಸ್ಕಿ ಶಾಸಕ ಪ್ರತಾಪ್ಗೌಡ ಪಾಟೀಲ್, ಬಳ್ಳಾರಿಯ ನಾಗೇಂದ್ರ, ವಿಜಯನಗರದ ಆನಂದ್ ಸಿಂಗ್ ಜತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತುಕತೆ ನಡೆಸಿದ್ದು, ಇನ್ನೂ ಕೆಲವರು ಅತೃಪ್ತರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ.
ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿದೇಶದಿಂದ ಮರಳಿದ ತಕ್ಷಣವೇ ಸಮ್ಮಿಶ್ರ ಸರ್ಕಾರದ ಅಳಿವು, ಉಳಿವಿಗೆ ಮುಹೂರ್ತ ನಿಗದಿಯಾಗಲಿದೆ ಎಂದು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದ್ದಾರೆ.
ಸೆ.17ರೊಳಗೆ ಸರ್ಕಾರ ಪತನವಾಗುವ ನಿರೀಕ್ಷೆ ಇದೆ. ರಾಜ್ಯ ಸರ್ಕಾರದ ಭವಿಷ್ಯ ಬೆಳಗಾವಿ ರಾಜಕಾರಣಿಗಳ ಕೈಯಲ್ಲಿದೆ. ಸಚಿವ ರಮೇಶ್ ಜಾರಕಿಹೊಳಿ ಸೇರಿ ಯಾರೇ ಬಿಜೆಪಿಗೆ ಬಂದರೂ ಸ್ವಾಗತ ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.