
ಬೆಂಗಳೂರು, [ಜೂ.17]: 12 ಐಪಿಎಸ್ ಅಧಿಕಾರಿಗಳನ್ನು ವಗಾರ್ವಣೆ ಮಾಡಿದ್ದ ಬೆನ್ನಲ್ಲೆ ರಾಜ್ಯ ಸರ್ಕಾರ ಇಂದು [ಸೋಮವಾರ] 9 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಆದೇಶ ಹೊರಡಿಸಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ರಾಕೇಶ್ ಸಿಂಗ್ ವಿರುದ್ಧ ಹಲವು ಶಾಸಕರು ಅಸಮಧಾನ ವ್ಯಕ್ತಪಡಿಸುವ ಮೂಲಕ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗೆ ಒತ್ತಡ ಹಾಕಿದ್ದರು. ಈ ಹಿನ್ನೆಲೆ ಅವರನ್ನು ವರ್ಗಾವಣೆ ಮಾಡಲಾಗಿದೆ.
ಪಿ. ರವಿಕುಮಾರ್, ಮಹೇಂದ್ರ ಜೈನ್, ಬಿ.ಎಚ್. ಅನಿಲ್ ಕುಮಾರ್, ಪ್ರಿಯಾಂಕ ಮೇರಿ ಫ್ರಾನ್ಸಿಸ್, ಎಸ್.ಎಸ್ ನಕುಲ್, ಡಾ. ವಿ.ರಾಮ್ ಪ್ರಶಾಂತ್ ಮನೋಹರ್, ಜಿ.ಸಿ. ವೃಷಭೇಂದ್ರ ಮೂರ್ತಿ ಅವರು ವರ್ಗಾವಣೆಯಾಗಿದ್ದಾರೆ.
ಪಿ.ರವಿಕುಮಾರ್ : ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಿಂದ ಸರ್ಕಾರದ ಹೆಚ್ಚುವರಿ ನಿರ್ದೇಶಕ ಸ್ಥಾನಕ್ಕೆ ವರ್ಗ ಮಾಡಲಾಗಿದೆ.
ಮಹೇಂದ್ರ ಜೈನ್ : ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಿಂದ ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಇವರನ್ನು ಉನ್ನತ ಶಿಕ್ಷಣ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಗಿಯೂ ನೇಮಕ ಮಾಡಲಾಗಿದೆ.
ರಾಕೇಶ್ ಸಿಂಗ್: ಜಲ ಸಂಪನ್ಮೂಲ ಇಲಾಖೆ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಎನ್.ಮಂಜುಳಾ: ಪದವಿ ಪೂರ್ವ ಇಲಾಖೆ ಆಯುಕ್ತೆ ಸ್ಥಾನದ ಜತೆಗೆ ಬಿಡಿಎಯ ಆಯುಕ್ತರನ್ನಾಗಿ ಸಹ ನೇಮಿಸಲಾಗಿದೆ.
ಅತಿ ಸಣ್ಣ, ಸಣ್ಣ, ಮಧ್ಯಮ ವ್ಯಾಪಾರ ಇಲಾಖೆ ನಿರ್ದೇಶಕರಾಗಿದ್ದ ವೃಷಬೇಂದ್ರ ಮೂರ್ತಿ ಅವರನ್ನು ರೇಷ್ಮೆ ಕೃಷಿ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.
ಪ್ರಿಯಾಂಕಾ ಮೇರಿ ಫ್ರಾನ್ಸಿಸ್: ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಯಾವುದೇ ಹುದ್ದೆ ಇಲ್ಲದೆ ಇದ್ದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ಮಾಹಿತಿ, ಜೀವ ವಿಜ್ಞಾನ ತಂತ್ರಜ್ಞಾನ ವಿಭಾಗದ ನಿರ್ದೇಶಕ ಸ್ಥಾನಕ್ಕೆ ವರ್ಗ ಮಾಡಲಾಗಿದೆ.
ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ ಆಗಿದ್ದ ರಾಮ್ ಪ್ರಶಾಂತ್ ಮನೋಹರ್ ಅವರನ್ನು ಉದ್ಯೋಗ ಮತ್ತು ತರಬೇತಿ ವಿಭಾಗದ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.