
ಹಾಸನ (ಸೆ. 12): ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಯಾವಾಗ ಪತನವಾಗುತ್ತೋ ಎನ್ನುವ ಡೋಲಾಯಮಾನ ಸ್ಥಿತಿಯಲ್ಲಿದೆ. ಹೀಗಿರುವಾಗ ಸಮ್ಮಿಶ್ರ ಸರ್ಕಾರದ ಮೇಲೆ ಕೋಡಿ ಮಠದ ಶ್ರೀ ಭವಿಷ್ಯ ನುಡಿದಿದ್ದಾರೆ.
ಸಮ್ಮಿಶ್ರ ಸರ್ಕಾರಕ್ಕೆ ಸಹೋದರರಿಂದ ಕಂಟಕ ಇದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ಭವಿಷ್ಯ ನುಡಿದಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದೆ. ಬುಧವಾರ ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದಲ್ಲಿ ಮಾತನಾಡಿರುವ ರಾಜೇಂದ್ರ ಸ್ವಾಮಿಗಳು, ರಾಜ್ಯ ಸರ್ಕಾರಕ್ಕೆ ಸಹೋದರರಿಂದ ಕಂಟಕವಿದ್ದು, ನವೆಂಬರ್ ತಿಂಗಳವರೆಗೂ ರಾಜಕೀಯ ಪರಿಸ್ಥಿತಿ ಡೋಲಾಯಮಾನವಾಗಿರುತ್ತದೆ ಎಂದು ನುಡಿದಿದ್ದಾರೆ.
ಬೆಳಗಾವಿ ಸಹೋದರರಂತೆ ಅಧಿಕಾರಕ್ಕಾಗಿ ಮತ್ತೋರ್ವ ಅಣ್ಣ ಹುಟ್ಟಿಕೊಳ್ಳುತ್ತಾನೆ. 2 ತಿಂಗಳ ಹಿಂದೆಯೇ ಬ್ರಾತೃ ಬಲ ಹೆಚ್ಚಿದೆ ಎಂದು ನಾನು ಹೇಳಿದ್ದೆ. ಅದರಂತೆ ಬೆಳಗಾವಿಯ ಸಹೋದರರು ಕಂಟಕವಾಗಿದ್ದಾರೆ ಎಂದು ಹೇಳಿದ್ದಾರೆ.
ಕೋಡಿ ಶ್ರೀ ನುಡಿದಂತೆ ಜಾರಕಿಹೊಳಿ ಸಹೋದರ ಹೊರತುಪಡಿಸಿ ಮೈತ್ರಿ ಸರ್ಕಾರಕ್ಕೆ ಕಂಟಕ ತರುವ ಆ ಅಣ್ಣ ಯಾರು ಎನ್ನುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಕೆರಳಿಸಿದೆ. 2018ರ ವಿಧಾನಸಭೆ ಚುನಾವಣೆ ವೇಳೆ ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಯೋಗವಿದೆ ಎಂದು ಶ್ರೀಗಳು ಹೇಳಿದ್ದರು. ಅದರಂತೆ ಕುಮಾರಸ್ವಾಮಿ ಕಾಂಗ್ರೆಸ್ ಬೆಂಬಲದಿಂದ ಮುಖ್ಯಮಂತ್ರಿಯಾಗಿರುವುದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.