
ಬೆಂಗಳೂರು, [ಅ.28]: ವಿಧಾನಪರಿಷತ್ಗೆ ನಡೆಯಬೇಕಿರುವ ಮೂರು ನಾಮನಿರ್ದೇಶನ ಪೈಕಿ ಕಾಂಗ್ರೆಸ್ ಕಡೆಯಿಂದ ಇಬ್ಬರ ಹೆಸರು ಅಂತಿಮಗೊಂಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಯು.ಬಿ.ವೆಂಕಟೇಶ್ ಮತ್ತು ಪ್ರಕಾಶ್ ರಾಥೋಡ್ ಹೆಸರು ಅಂತಿಮಗೊಂಡಿದ್ದು, ಸರ್ಕಾರದಿಂದ ರಾಜ್ಯಪಾಲರಿಗೆ ಪ್ರಸ್ತಾವನೆ ಹೋಗುವುದಷ್ಟೇ ಬಾಕಿ ಇದೆ.
ರಣಜಿ ಕ್ರಿಕೆಟ್ನಲ್ಲಿ ಕರ್ನಾಟಕ ತಂಡ ಪ್ರತಿನಿಧಿಸಿದ್ದ ಪ್ರಕಾಶ್ ರಾಥೋಡ್ ಈ ಹಿಂದೆ ಒಂದು ಅವಧಿಗೆ ಪರಿಷತ್ ಸದಸ್ಯರಾಗಿದ್ದರು. ಯು.ಬಿ. ವೆಂಕಟೇಶ್ರನ್ನು ಯಾವ ಕ್ಷೇತ್ರದಿಂದ ಆಯ್ಕೆ ಮಾಡಲಾಗುತ್ತಿದೆ ಎಂಬುದು ಪಕ್ಷದಲ್ಲಿ ಗೊಂದಲ ಉಂಟುಮಾಡಿದೆ.
ಇನ್ನು ಜೆಡಿಎಸ್ ಕಡೆಯಿಂದ ಯಾರು ಎಂಬ ಬಗ್ಗೆ ಇನ್ನೂ ತೀರ್ವನವಾಗಿಲ್ಲ. ದೇವೇಗೌಡರು ವಿದೇಶ ಪ್ರವಾಸದಿಂದ ವಾಪಸಾದ ಬಳಿಕ ಹೆಸರು ಅಂತಿಮಗೊಳ್ಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.