ಬೆಂಬಲಿಗರೊಂದಿಗೆ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಬಿಜೆಪಿಗೆ..?

Published : Mar 08, 2019, 01:29 PM ISTUpdated : Mar 08, 2019, 01:31 PM IST
ಬೆಂಬಲಿಗರೊಂದಿಗೆ ಮಾಜಿ ಸಚಿವ, ಕಾಂಗ್ರೆಸ್  ಹಿರಿಯ ಮುಖಂಡ ಬಿಜೆಪಿಗೆ..?

ಸಾರಾಂಶ

ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವರೋರ್ವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ವಿಚಾರವೊಂದು ಇದೀಗ ಎಲ್ಲೆಡೆ ಸದ್ದು ಮಾಡುತ್ತಿದೆ. 

ಹಾಸನ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ವಿವಿಧ ಪಕ್ಷಗಳ ನಡುವೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ಜೋರಾಗಿದೆ. ಇದೇ ವೇಳೆ ಕಾಂಗ್ರೆಸ್ ಹಿರಿಯ ಮುಖಂಡರೋರ್ವರು ಬಿಜೆಪಿ ಸೇರ್ಪಡೆಯಾಗುವ ಗುಸು ಗುಸು ಕೇಳಿ ಬಂದಿದೆ. 

ಹಾಸನದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದರೆ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿಜೆಪಿ ಹೋಗುತ್ತಾರೆ ಎನ್ನುವ ವಿಚಾರ ಕೇಳಿ ಬಂದಿದೆ. 

ಕಾಂಗ್ರೆಸ್ ಟಿಕೆಟ್‌ಗಾಗಿ ಕೊನೆ ಕ್ಷಣದವರೆಗೆ ಕಾಯುತ್ತೇನೆ: ಸುಮಲತಾ

ಜೆಡಿಎಸ್ ನಿಂದ ಪ್ರಜ್ವಲ್ ಸ್ಪರ್ಧಿಸಿದರೆ, ಬಿಜಪಿಯಿಂದ ಎ ಮಂಜು ಸ್ಪರ್ಧಿಸುವ ಸಾಧ್ಯತೆ ಇದೆ. ಈಗಾಗಲೇ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳಲ್ಲಿ ಎ. ಮಂಜು ಹೆಸರು ಪ್ರಸ್ತಾಪವಾಗಿದೆ. 

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಸಂಭಾವ್ಯರ ಪಟ್ಟಿ ಹರಿದಾಡುತ್ತಿದ್ದು ಅದರಲ್ಲಿ ಎ. ಮಂಜು ಹೆಸರು ಕಂಡು ಬಂದಿದ್ದು, ತಮ್ಮ ಬೆಂಬಲಿಗರೊಂದಿಗೆ ಮಂಜು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುದ್ದಿ ಹರಿದಾಡಲಾರಂಭಿಸಿದೆ. 

ಡಿಕೆಸು ವಿರುದ್ಧ ಕಣಕ್ಕೆ ಇಳಿಯುವ ಪ್ರಬಲ ಬಿಜೆಪಿ ಅಭ್ಯರ್ಥಿ ಯಾರು..?

ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಕೂಡ ಜೆಡಿಎಸ್ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿದ್ದು, ನೇರವಾಗಿಯೇ ಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. 

ಅಲ್ಲದೇ ಹಾಸನದಿಂದ ಲೋಕಸಭಾ ಚುನಾವಣೆಗೆ ಪ್ರಜ್ವಲ್ ಸ್ಪರ್ಧೆಯನ್ನು ವಿರೋಧಿಸಿದ್ದು, ದೇವೇಗೌಡರಿಗೆ ಮಾತ್ರವೇ ತಮ್ಮ ಬೆಂಬಲ ಎಂದಿದ್ದರು.  

ಇದೀಗ ಅಸಮಾಧಾನಗೊಂಡಿದ್ದು, ಬಿಜೆಪಿಗೆ ತೆರಳಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ