
ಬೆಂಗಳೂರು [ಜು.14] : ಕಾಂಗ್ರೆಸ್ ನಲ್ಲಿ ಈಗ ಅನುಮಾನದ ರಾಜಕೀಯ ಶುರುವಾಗಿದೆ. ಕಾಂಗ್ರೆಸ್ ಅಂಗಳದಲ್ಲಿ ಹೊಸ ರಾಜೀನಾಮೆ ಆಗದಂತೆ ನೋಡಿಕೊಳ್ಳುವುದರಲ್ಲಿ ನಾಯಕರು ಬ್ಯುಸಿಯಾಗಿದ್ದಾರೆ.
ಈಗಾಗಲೇ ರಾಜೀನಾಮೆ ನೀಡಿ ತೆರಳಿರುವ ಅತೃಪ್ತ ಕಾಂಗ್ರೆಸಿಗರ ಜೊತೆಗೆ ಸಂಪರ್ಕದಲ್ಲಿದ್ದಾರೆ ಎನ್ನುವವರ ಮೇಲೆ ಕಣ್ಣಿರಿಸಿದ್ದು, ತಡರಾತ್ರಿವರೆಗೂ ಕೂಡ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಹೊರಗಿನವರ, ಅಪರಿಚಿತರ ಸಂಪರ್ಕ ಆಗದಂತೆ ಕಟ್ಟೆಚ್ಚರಿಕೆ ವಹಿಸಲಾಗಿದೆ. ಕಾಂಗ್ರೆಸ್ ಅತೃಪ್ತರು ಇದೀಗ ಒಗ್ಗಟ್ಟಿನಿಂದ ಸಾಗಿದ್ದು ಅವರ ಒಗ್ಗಟ್ಟು ಒಡೆಯಲೂ ಪ್ರಯತ್ನಗಳು ನಡೆದಿದೆ.
ಅತೃಪ್ತರ ಕುಟಂಬಸ್ಥರು, ಆರ್ಥಿಕ ನೆರವು ನೀಡುವವರ ಮನ ಒಲಿಸುವ ಕುರಿತು ಕಾಂಗ್ರೆಸ್ ನಾಯಕರು ಪ್ಲಾನ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.