
ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಸರ್ಕಾರ ರಚನೆಯಾದರೂ ಸಂಪುಟ ಸರ್ಕಸ್ ಮಾತ್ರ ಇನ್ನೂ ಕೊನೆಗೊಂಡಿಲ್ಲ. ಸಚಿವ ಸ್ಥಾನಕ್ಕಾಗಿ ಲಾಬಿ ಮುಂದುವರಿದಿದ್ದು, ಪಕ್ಷದಲ್ಲಿಯೇ ಪೈಪೋಟಿ ನಡೆಯುತ್ತಿದೆ. ಸದ್ಯ ಯಾರಿಗೆ ಯಾವ ಸ್ಥಾನ ಎನ್ನುವ ಬಗ್ಗೆ ಕಾಂಗ್ರೆಸ್ ಹೈ ಕಮಾಂಡ್ ಸಭೆ ನಡೆಸಿ ತೀರ್ಮಾನ ಮಾಡಲಿದೆ.
ದೆಹಲಿಯಲ್ಲಿ ಸಚಿವರ ಫೈನಲ್ ಪಟ್ಟಿಗಾಗಿ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯ ನಾಯಕರು ರಾಹುಲ್ ಗಾಂಧಿ ಮುಂದಿಟ್ಟಿದ್ದಾರೆ.
ಜಾತಿವಾರು ಲೆಕ್ಕಾಚಾರ ಹಾಕಿ ಸಚಿವರ ಆಯ್ಕೆಗೆ ಕೈ ನಾಯಕರು ಆದ್ಯತೆ ನೀಡಿದ್ದಾರೆ. ಹಿರಿಯ ಶಾಸಕರು, ಕಿರಿಯ ಶಾಸಕರು ಹೆಚ್ಚಿರುವ ಪಟ್ಟಿಯನ್ನು ನೋಡಿ ರಾಹುಲ್ ಗಾಂಧಿ ಇಂದು ಅಂತಿಮ ತೀರ್ಮಾನ ಮಾಡಲಿದ್ದಾರೆ.
ಕಾಂಗ್ರೆಸ್ ಹೈ ಕಮಾಂಡ್ ನೊಂದಿಗೆ ನಡೆಯುವ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಪರಮೇಶ್ವರ್ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.