ಕಾಂಗ್ರೆಸ್ ಸಚಿವರ ಲಾಬಿಗೆ ಸಿಎಂ ಬಿಗ್ ಬ್ರೇಕ್

Published : Oct 19, 2018, 07:03 AM IST
ಕಾಂಗ್ರೆಸ್ ಸಚಿವರ ಲಾಬಿಗೆ ಸಿಎಂ ಬಿಗ್ ಬ್ರೇಕ್

ಸಾರಾಂಶ

ಕಾಂಗ್ರೆಸ್ ಸಚಿವರ ಲಾಬಿಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಇದೀಗ ಬ್ರೇಕ್ ಹಾಕಿದ್ದಾರೆ. ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ಸರ್ಕಾರದ ಮುಖ್ಯಕಾರ್ಯದರ್ಶಿ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. 

ಬೆಂಗಳೂರು :  ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಕಾಂಗ್ರೆಸ್ ಸಚಿವರ ಲಾಬಿಗೆ ಬ್ರೇಕ್ ಬಿದ್ದಿದ್ದು, ಸರ್ಕಾರದಿಂದ ಈ ನಿಟ್ಟಿನಲ್ಲಿ ಹೊಸ ಸುತ್ತೊಲೆ ಹೊರಡಿಸಲಾಗಿದೆ.  ಸಿಎಂ ಗಮನಕ್ಕೆ ಬಂದು ವರ್ಗಾವಣೆ ಆದ ಅಧಿಕಾರಿಗಳಿಗೆ ಮರುಸ್ಥಳ ಕೊಡುವುದಿಲ್ಲ ಎಂದು  ಸಿಎಸ್ ಸುತ್ತೋಲೆ ಹೊರಡಿಸಿದ್ದಾರೆ. 

ವರ್ಗಾವಣೆಗೊಂಡು ಮರುಸ್ಥಳಕ್ಕೆ ಲಾಬಿ ಮಾಡುವ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದ್ದು, ವರ್ಗಾವಣೆ ಮಾಡಿದ ಸ್ಥಳಕ್ಕೆ ಸರಿಯಾದ ಸಮಯಕ್ಕೆ ರಿಪೋರ್ಟ್ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ.  

ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಆದೇಶ ನೀಡಿದ್ದು, ವರ್ಗಾವಣೆ ಮಾಡಿದ ಮೇಲೆ ರಿಪೋರ್ಟ್ ಮಾಡಿಕೊಳ್ಳಲು ಅಧಿಕಾರಿಗಳು ವಿಳಂಭ ಧೋರಣೆ ಅನುಸರಿಸುತ್ತಿದ್ದಾರೆಂದು ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ. 

ಇನ್ನು ಮುಖ್ಯಮಂತ್ರಿಗಳ ಅನುಮೋದನೆಗೆ ಹೋಗಿ ಆಗಿರುವ ವರ್ಗಾವಣೆಗೆ ಯಾವುದೇ ರೀತಿಯ ಮರುಸ್ಥಳ ನೀಡುವುದಿಲ್ಲ ಎಂದು ಸುತ್ತೊಲೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?