‘ಡಿಸಿಎಂ ಲಕ್ಷ್ಮಣ ಸವದಿಗೆ ಸಿಎಂ ಯೋಗ’ ಭವಿಷ್ಯವಾಣಿ

Published : Aug 30, 2019, 08:12 PM ISTUpdated : Aug 30, 2019, 08:19 PM IST
‘ಡಿಸಿಎಂ ಲಕ್ಷ್ಮಣ ಸವದಿಗೆ ಸಿಎಂ ಯೋಗ’ ಭವಿಷ್ಯವಾಣಿ

ಸಾರಾಂಶ

ಡಿಸಿಎಂ ಲಕ್ಷ್ಮಣ ಸವದಿ ಸಿಎಂ ಆಗ್ತಾರಂತೆ/ ಭವಿಷ್ಯ ನುಡಿದ ಸ್ವಾಮೀಜಿ/ ರಾಜಕೀಯದಲ್ಲಿ ಇನ್ನು ಮುಂದೆ ದೊಡ್ಡ ಹುದ್ದೆ ಸಿಗಲಿದೆ/ ಜನ ಸೇವೆ ಮಾಡಲು ಸವದಿ ರಾಜಕಾರಣ ಮಾಡುತ್ತಾರೆ

ಬೆಳಗಾವಿ[ಆ. 30]  ಡಿಸಿಎಂ ಲಕ್ಷ್ಮಣ ಸವದಿಗೆ ಮುಂದಿನ ದಿನದಲ್ಲಿ ಸಿಎಂ ಆಗುವ ಯೋಗ ಇದೆ ಎಂದು ಸ್ವಾಮೀಜಿಯೊಬ್ಬರು ಭವಿಷ್ಯ ನುಡಿದಿದ್ದಾರೆ.

ಬೈಲಹೊಂಗಲ ತಾಲೂಕಿನ ಇಂಚಲ ಮಠದ ಡಾ.ಶಿವಾನಂದ ಭಾರತೀ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಲಕ್ಷ್ಮಣ ಸವದಿ ಉಪಮುಖ್ಯಮಂತ್ರಿ ಆಗಿದ್ದು ನನಗೆ ಖುಷಿ ತಂದಿದೆ. ಅವರು ಜನರ ಸೇವೆಗೆ ಬಂದಿದ್ದಾರೆ. ಇಂಥ ವ್ಯಕ್ತಿ ನಮ್ಮ ಭಕ್ತ ನಾಗಿದ್ದು ನನಗೆ ಖುಷಿಯಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.

ಬ್ಯಾಂಕ್‌ಗಳ ವಿಲೀನ, ಡಿಕೆಶಿಗೆ ED ಕುಣಿಕೆ: ಇಲ್ಲಿವೆ ಆ. 30ರ ಟಾಪ್ ಸುದ್ದಿಗಳು

ಮುಂದಿನ ದಿನದಲ್ಲಿ ಸವದಿ ಮುಖ್ಯಮಂತ್ರಿ   ಆಗಲಿದ್ದಾರೆ. ಲಕ್ಷ್ಮಣ ಸವದಿ ಅವರಿಗೆ ಮುಂದಿನ ದಿನದಲ್ಲಿ ಉನ್ನತ ಮಟ್ಟದ ಸ್ಥಾನ ಕೊಡಲಿ. ಸವದಿ ಅವರು ಮಠದ ಪರಮ ಭಕ್ತರು. ಲಕ್ಷ್ಮಣ ಸವದಿ ಅವರು ನಿಷ್ಠಾವಂತ ವ್ಯಕ್ತಿ. ತಾರತಮ್ಯವಿಲ್ಲದೆ ರಾಜಕಾರಣ ಮಾಡುವ ಅವರಿಗೆ ಮುಂದಿನ ದಿನದಲ್ಲಿ ಸಿಎಂ ಹುದ್ದೆ ಸಿಗಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!