
ನವದೆಹಲಿ : ಇದೀಗ ಕರ್ನಾಟಕ ವಿಧಾನಸಭಾ ಚುನಾವಣೆ ಬಗ್ಗೆ ದೊಡ್ಡ ಕಾಂಟ್ರವರ್ಸಿ ಎದುರಾಗಿದೆ. ಚುನಾವಣಾ ದಿನಾಂಕ ಪ್ರಕಟವಾಗುವ ಮುನ್ನ ಬಿಜೆಪಿ ಐಟಿ ಸೆಲ್ ಮುಖಂಡರಾದ ಅಮಿತ್ ಮಾಳವಿಯಾ ಅವರು ಚುನಾವಣಾ ದಿನಾಂಕವನ್ನು ಟ್ವೀಟ್ ಮಾಡಿದ್ದರು, ಇದೀಗ ಎಲ್ಲೆಡೆ ಸುದ್ದಿಯಾಗುತ್ತಿದ್ದು, ಚುನಾವಣಾ ಆಯೋಗ ದಿನಾಂಕ ಪ್ರಕಟ ಮಾಡುವ ಮುನ್ನ ಬಿಜೆಪಿ ಐಟಿ ಸೆಲ್ ಮುಖಂಡರಿಗೆ ಹೇಗೆ ದಿನಾಂಕದ ಬಗ್ಗೆ ಮಾಹಿತಿ ದೊರಕಿತು ಎಂದು ಎಲ್ಲೆಡೆ ಪ್ರಶ್ನೆಗಳು ಎದ್ದಿವೆ.
ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಪ್ರಶ್ನೆ ಮಾಡಿದ್ದಕ್ಕೆ ಉತ್ತರಿಸಿದ ಕೇಂದ್ರ ಚುನಾವಣಾ ಆಯುಕ್ತ ಪ್ರಕಾಶ್ ರಾವತ್ ಈ ಬಗ್ಗೆ ಸೂಕ್ತ ತನಿಖೆಯನ್ನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಕಾನೂನಾತ್ಮಕವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಕೆಲವೊಂದು ವಿಚಾರಗಳು ಲೀಕ್ ಆಗುತ್ತವೆ. ಆದರೆ ಚುನಾವಣಾ ಆಯೋಗ ಕ್ರಮ ಜರುಗಿಸುತ್ತದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಮೇ 12ರಂದು ಚುನಾವಣೆ ನಡೆಯುತ್ತಿದ್ದು, ಮೇ 15ರಂದು ಚುನಾವಣಾ ದಿನಾಂಕ ಪ್ರಕಟವಾಗುತ್ತಿದೆ. ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡುವ ಮೊದಲು ಬಿಜೆಪಿ ಐಟಿ ಸೆಲ್ ಮುಖಂಡ ಅಮಿತ್ ಮಾಳವಿಯಾ ಅವರು ಈ ಬಗ್ಗಟ ಟ್ವೀಟ್ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.