ಕಿಸಾನ್ ಸಮ್ಮಾನ್ : 2000 ರೂಗೆ ಸುಗ್ರೀವಾಜ್ಞೆ

Published : Aug 06, 2019, 10:35 AM ISTUpdated : Aug 06, 2019, 11:31 AM IST
ಕಿಸಾನ್ ಸಮ್ಮಾನ್ : 2000 ರೂಗೆ ಸುಗ್ರೀವಾಜ್ಞೆ

ಸಾರಾಂಶ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ 2 ಸಾವಿರ ರೂ ಬಿಡುಗಡೆ | ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಕೇಂದ್ರ ಸರ್ಕಾರಕ್ಕೆ 43.75 ಲಕ್ಷ ಅರ್ಹ ಫಲಾನುಭವಿಗಳನ್ನು ಘೋಷಣೆ ಮಾಡುವಂತೆ ಕಳುಹಿಸಲಾಗಿದೆ.

ಬೆಂಗಳೂರು (ಆ. 06): ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ ವತಿಯಿಂದ ಪಾವತಿಸುವ 4000 ರು. ಗಳಲ್ಲಿ ಮೊದಲ ಕಂತಿನ 2000 ರು. ಬಿಡುಗಡೆಗೆ ಸುಗ್ರೀವಾಜ್ಞೆ ಹೊರಡಿಸಲಾಗಿದೆ.

ಕಿಸಾನ್ ಸಮ್ಮಾನ್ ಯೋಜನೆ ಜಾರಿ ಮಾಡಲು ತುರ್ತು ನಿರ್ವಹಣೆಗಾಗಿ ಬಳಸುವ ಕರ್ನಾಟಕ ಸಾದಿಲ್ವಾರು ನಿಧಿ ಅಧಿನಿಯಮ 1957 ಕ್ಕೆ ತಿದ್ದುಪಡಿ ತಂದು ಅಧ್ಯಾದೇಶ ಹೊರಡಿಸುವ ಮೂಲಕ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಆಪತ್ಕಾಲೀನ ನಿಧಿಯನ್ನು ಬಳಸಿಕೊಂಡು ತಾವು ನೀಡಿರುವ ಆಶ್ವಾಸನೆ ಪೂರೈಸಿದ ಹೊಸ ಸಂಪ್ರದಾಯಕ್ಕೆ ಯಡಿಯೂರಪ್ಪ ನಾಂದಿ ಹಾಡಿದ್ದಾರೆ.

ರಾಜ್ಯದ ತುರ್ತು ಕಾರ್ಯಕ್ರಮಗಳ ನಿರ್ವಹಣಾ ನಿಧಿಯ ಮೊತ್ತವನ್ನು 80 ಕೋಟಿ ರು.ನಿಂದ 2200 ಕೋಟಿ ರು.ಗೆ ಹೆಚ್ಚಿಸಲು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಕಂತಿನ ಎರಡು ಸಾವಿರ ರು. ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ತೀರ್ಮಾನ ಕೈಗೊಂಡಿದ್ದಾರೆ.

ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸಲಾಗಿದ್ದು, ರಾಜ್ಯ ಪಾಲರ ಒಪ್ಪಿಗೆ ಸಿಕ್ಕ ಬಳಿಕ ಅನುಷ್ಠಾನಗೊಳ್ಳಲಿದೆ. ಕೇಂದ್ರ ಸರ್ಕಾರವು ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ವಾರ್ಷಿಕ 6 ಸಾವಿರ
ರು. ನೆರವು ನೀಡುವ ಯೋಜನೆಗೆ ಪೂರಕವಾಗಿ ರಾಜ್ಯ ಸರ್ಕಾರವು ಘೋಷಿಸಿರುವ 4 ಸಾವಿರ ರು. ನೆರವಿನ ಯೋಜನೆ ಜಾರಿಗೆ ಯಡಿಯೂರಪ್ಪ ಮುಂದಾಗಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಕೇಂದ್ರ ಸರ್ಕಾರಕ್ಕೆ 43.75 ಲಕ್ಷ ಅರ್ಹ ಫಲಾನುಭವಿಗಳನ್ನು ಘೋಷಣೆ ಮಾಡುವಂತೆ ಕಳುಹಿಸಲಾಗಿದೆ.

ಈ ಪೈಕಿ 31.72 ಲಕ್ಷ ಫಲಾನುಭವಿಗಳಿಗೆ ಪ್ರತಿ ರೈತನಿಗೆ 6 ಸಾವಿರ ರು.ನಂತೆ 634. 50 ಕೋಟಿ ರು. ನೇರವಾಗಿ ಅವರ ಖಾತೆಗಳಿಗೆ ಜಮೆ ಮಾಡಲಾಗಿದೆ. ಈ ಫಲಾನುಭವಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಮೊದಲನೇ ಕಂತಾಗಿ 2 ಸಾವಿರ ರು. ಖಾತೆಗೆ ಜಮೆ ಮಾಡಲಾಗುವುದು. ಕೇಂದ್ರ ಈಗಾಗಲೇ ಫಲಾನುಭವಿಗಳನ್ನು ಗುರುತಿಸಿದ್ದರಿಂದ ರಾಜ್ಯಕ್ಕೆ ಈ ಸಮಸ್ಯೆ ಇಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Fauda: 'ಫೌಡಾ' ನಟರ ಜೊತೆ ಪ್ರಧಾನಿ ಮೋದಿ ಸೆಲ್ಫಿ! ಫೋಟೋ ಸಖತ್ ವೈರಲ್
Operation Sindoor: ಆಪರೇಷನ್ ಸಿಂದೂರ್-2 ಇನ್ನೂ ಮುಗಿದಿಲ್ಲ, ಪಾಕಿಸ್ತಾನಕ್ಕೆ ಭಾರತದ ಖಡಕ್ ವಾರ್ನಿಂಗ್!