ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಶಿವಸೇನೆ ಒತ್ತಾಯ

Published : Jul 18, 2017, 07:37 PM ISTUpdated : Apr 11, 2018, 12:45 PM IST
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಶಿವಸೇನೆ ಒತ್ತಾಯ

ಸಾರಾಂಶ

ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಕ್ರಮವನ್ನು ಖಂಡಿಸಿರುವ ಶಿವಸೇನೆ, ರಾಜ್ಯ ಸರ್ಕಾರವನ್ನು ವಜಾಮಾಡಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕೆಂದು ಕೇಂದ್ರವನ್ನು ಒತ್ತಾಯಿಸಿದೆ.

ನವದೆಹಲಿ: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಕ್ರಮವನ್ನು ಖಂಡಿಸಿರುವ ಶಿವಸೇನೆ, ರಾಜ್ಯ ಸರ್ಕಾರವನ್ನು ವಜಾಮಾಡಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕೆಂದು ಕೇಂದ್ರವನ್ನು ಒತ್ತಾಯಿಸಿದೆ.

ಈ ಬೇಡಿಕೆಯು ಸಂವಿಧಾನ ವಿರೋಧಿಯಾಗಿರುವುದರಿಂದ ಕರ್ನಾಟಕ ಸರ್ಕಾರವನ್ನು ವಜಾಮಾಡಬೇಕು ಹಾಗೂ ಅಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಬೇಕು ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರವನ್ನು ಮುಂದಿಟ್ಟುಕೊಂಡು ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದಾದಲ್ಲಿ, ನಾಳೆ ಪ್ರತ್ಯೇಕ ರಾಷ್ಟ್ರದ ಬೇಡಿಯನ್ನಿಡಬಹುದು; ಮುಖ್ಯಮಂತ್ರಿಗೆ ಪ್ರಧಾನಿಯ ಮಾನ್ಯತೆಯನ್ನು ಬಯಸಬಹುದು, ಎಂದು ರಾವತ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಕರ್ನಾಟಕಕ್ಕೆ ಪ್ರತ್ಯೇಕ ನಾಡಧ್ವಜ ಹೊಂದುವ ಬಗ್ಗೆ ಕಾನೂನಾತ್ಮಕ ಅಂಶಗಳನ್ನು ಅವಲೋಕಿಸಲು ರಾಜ್ಯ ಸರಕಾರವು 9 ಮಂದಿಯ ಸಮಿತಿಯನ್ನು ರಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಾವು-ಮುಂಗುಸಿಯಂತಿದ್ದ ನಯನತಾರಾ-ತ್ರಿಷಾ ಕೃಷ್ಣನ್ ಬೀಚ್‌ನಲ್ಲಿ ಸುತ್ತಾಟ.. ಈ ಶತ್ರುಗಳು ಸ್ನೇಹಿತರಾಗಿದ್ದು ಹೇಗೆ?
ಶ್ರೀ ರಾಮನವಮಿ ದಿನವೇ ರಿಲೀಸ್ ಆಗುತ್ತಾ ರಾಜಮೌಳಿ-ಮಹೇಶ್ ಬಾಬು ಜೋಡಿಯ 'ವಾರಣಾಸಿ' ಸಿನಿಮಾ?