ಕರಾವಳಿ, ಮಲೆನಾಡದಲ್ಲಿ ಮತ್ತೆ ಭೂಕುಸಿತದ ಆತಂಕ

Published : Aug 13, 2019, 08:18 AM IST
ಕರಾವಳಿ, ಮಲೆನಾಡದಲ್ಲಿ ಮತ್ತೆ ಭೂಕುಸಿತದ ಆತಂಕ

ಸಾರಾಂಶ

ಕರಾವಳಿ, ಮಲೆನಾಡದಲ್ಲಿ ಮತ್ತೆ ಭೂಕುಸಿತದ ಆತಂಕ| ಅಧಿಕಾರಿಗಳಿಂದ ಬಿರುಕು ಬಿಟ್ಟಗುಡ್ಡವನ್ನು ಪರಿಶೀಲನೆ

ಬೆಂಗಳೂರು[ಆ.13]: ಪುತ್ತೂರು, ಕೆಮ್ಮಣ್ಣುಗುಂಡಿ, ಬೆಳ್ತಂಗಡಿ ಭಾಗದಲ್ಲಿ ಸೋಮವಾರ ಗುಡ್ಡ, ಧರೆ ಕುಸಿತ ಉಂಟಾಗಿದ್ದು, ಇದೀಗ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭೂಕುಸಿತದ ಆತಂಕ ಸೃಷ್ಟಿಸಿದೆ. ಇತೀಚೆಗಷ್ಟೆಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಭೂಕುಸಿತವಾಗಿರುವುದರಿಂದ ಸಹಜವಾಗಿ ಆತಂಕವನ್ನು ಹೆಚ್ಚಿಸಿದೆ.

ಪುತ್ತೂರು ನಗರ ವ್ಯಾಪ್ತಿಯ ತೆಂಕಿಲ ದರ್ಖಾಸು ಎಂಬಲ್ಲಿ ಗೇರು ಅಭಿವೃದ್ಧಿ ನಿಗಮಕ್ಕೆ ಸೇರಿದ ಗೇರು ತೋಟಗಳಿರುವ ಗುಡ್ಡವೊಂದರಲ್ಲಿ ಬಿರುಕು ಕಾಣಿಸಿಕೊಂಡಿದೆ. ಸೋಮವಾರ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಗುಡ್ಡದಲ್ಲಿ ಭೂ ಕಂಪನ ನಡೆಯುವ ಸಾಧ್ಯತೆಗಳ ಅಪಾಯದ ಬಗ್ಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ವರುಣನ ಅಬ್ಬರಕ್ಕೆ ಕರುನಾಡು ತತ್ತರ: ಮಳೆಗೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಕ್ಲಿಕ್ಕಿಸಿ

ಬಿರುಕು ಬಿಟ್ಟಗುಡ್ಡವನ್ನು ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಭೂ ವಿಜ್ಞಾನ ಇಲಾಖೆಯ ಪ್ರಭಾರ ನಿರ್ದೇಶಕಿ ಪದ್ಮಶ್ರೀ, ಗುಡ್ಡದ ರಚನಾ ವಲಯವು ಬಿರುಕು ಬಿಟ್ಟಿದ್ದು, ಇದು ಅಪಾಯಕಾರಿ ವಲಯವಾಗಿದೆ. ತೇವಾಂಶ ರಹಿತ ಪದರವು ಮಳೆಗಾಲದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೀರಿಕೊಳ್ಳುತ್ತಿದೆ. ಇದರಿಂದಾಗಿ ಮಣ್ಣಿನ ಒಳಗೆ ಶೇಖರಣೆಗೊಂಡ ನೀರು ಹೊರಹೋಗಲು ಸಾಧ್ಯವಾಗದೆ ಒತ್ತಡ ನಿರ್ಮಾಣಗೊಂಡು ಬಿರುಕು ಬಿಟ್ಟಿದೆ ಎಂದು ಹೇಳಿದ್ದಾರೆ.

ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಟ್ರಕ್‌ ಪಾಯಿಂಟ್‌ ಬಳಿ ಸೀಮೆಂಟ್‌ ರಸ್ತೆ ಕೆಳಗಡೆ ಸುಮಾರು 100 ಅಡಿ ಭೂ ಕುಸಿತ ಕಂಡು ಬಂದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಬೆಟ್ಟಪ್ರದೇಶದಲ್ಲಿ ಅಲ್ಲಲ್ಲಿ ಭಾರಿ ಭೂ ಕುಸಿತಗಳು ಸಂಭವಿಸಿದ್ದು, ಸುಮಾರು 10 ಕುಟುಂಬಗಳ 10ಕ್ಕೂ ಹೆಚ್ಚು ಎಕರೆ ಕೃಷಿ ಭೂಮಿ ಸಂಪೂರ್ಣ ನಾಶಗೊಂಡಿದೆ. ಸುಮಾರು 4 ಕಿ.ಮೀ. ಉದ್ದಕ್ಕೆ ಹೊಸ ನದಿ ಸೃಷ್ಟಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!