
ಬೆಂಗಳೂರು[ಜು. 22] ವಿಶ್ವಾಸ ಮತ ಯಾಚನೆಗೆ ಮತ್ತೊಂದು ಮುಹೂರ್ತ ಫಿಕ್ಸ್ ಆಗಿದೆ. ಸ್ಪೀಕರ್ ರಮೇಶ್ ಕುಮಾರ್ ಅಂತಿಮವಾಗಿ ಕಲಾಪವನ್ನು ನಾಳೆ ಅಂದರೆ ಮಂಗಳವಾರ ಬೆಳಗ್ಗೆ 10 ಗಂಟೆಗೆ ಮುಂದೂಡಿದ್ದಾರೆ. ಮಂಗಳವಾರ 6 ಗಂಟೆ ಒಳಗೆ ಎಲ್ಲ ಪ್ರಕ್ರಿಯೆ ಮುಗಿಯಬೇಕು ಎಂದು ಹೇಳಿದ್ದಾರೆ.
ಮಂಗಳವಾರ ಸಂಜೆ 4 ಗಂಟೆಯೊಳಗೆ ಚರ್ಚೆ ಮುಗಿಸಿ ಸಂಜೆ 6 ಗಂಟೆ ವೇಳೆಗೆ ವಿಶ್ವಾಸಮತ ಪೂರ್ಣಗೊಳಿಸೋಣ ಎಂದು ಸಮಯ ನಿಗದಿ ಮಾಡಿ ಸ್ಪೀಕರ್ ರಮೇಶ್ ಕುಮಾರ್ ತೆರಳಿದರು.
ಪಾಪ ನಮ್ಮ ನಾಯಕರಿಗೆ ರಾತ್ರಿ ಊಟ ಇಲ್ಲ, ರೇವಣ್ಣ ನಿದ್ದೆಗೂ ಬ್ರೇಕ್ ಬಿದ್ದಿಲ್ಲ!
ಸೋಮವಾರ ಮಧ್ಯಾಹ್ನ 12 ಗಂಟೆಯಿಂದ ಆರಂಭವಾದ ಚರ್ಚೆ ನಿರಂತರವಾಗಿ ರಾತ್ರಿ 11.30ರವರೆಗೂ ಮುಂದುವರಿದಿತ್ತು. ಶಾಸಕರು ತಮ್ಮ ತಮ್ಮ ಅಭಿಪ್ರಾಯ ಹೊರ ಹಾಕಿದರು. ಅದೆಷ್ಟೂ ಹೈಡ್ರಾಮಾಗಳು ನಡೆದರೂ ಅಂತಿಮವಾಗಿ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಾಗಲಿಲ್ಲ.
ಇಡೀ ದಿನ ಕಾಳಹರಣ, ವ್ಯರ್ಥ ಚರ್ಚೆಗಳು, ಬೇಡದ ಗಲಾಟೆ, ಆಡಳಿತ ಪಕ್ಷದವರಿಂದಲೇ ಧಿಕ್ಕಾರ.... ಅಂತೂ ಇಂತೂ ಮಧ್ಯರಾತ್ರಿ ಕಳೆದ ಮೇಲೆ ಇನ್ನೊಂದು ದಿನ ದೋಸ್ತಿ ಸರ್ಕಾರಕ್ಕೆ ಆಕ್ಸಿಜನ್ ಸಿಕ್ಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.