ಅಂತಿಮ ಸರ್ಕಸ್,  ಬೆಂಗಾವಲು ವಾಹನ ಬಿಟ್ಟು ಸಿದ್ದರಾಮಯ್ಯ ಬಂದಿದ್ದು ಈ ಶಾಸಕರ ಪತ್ತೆಗೆ!

Published : Jul 21, 2019, 07:42 PM ISTUpdated : Jul 21, 2019, 07:45 PM IST
ಅಂತಿಮ ಸರ್ಕಸ್,  ಬೆಂಗಾವಲು ವಾಹನ ಬಿಟ್ಟು  ಸಿದ್ದರಾಮಯ್ಯ ಬಂದಿದ್ದು ಈ ಶಾಸಕರ ಪತ್ತೆಗೆ!

ಸಾರಾಂಶ

ದೋಸ್ತಿ ಸರ್ಕಾರ ಉಳಿಸಿಕೊಳ್ಳಲು ಅಂತಿಮ ಕಸರತ್ತುಗಳು ನಡೆಯುತ್ತಲೇ ಇವೆ. ಅಖಾಡದಲ್ಲಿಯೇ ಇರುವ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಮುಂಬೈಗೆ ತೆರಳಿರದ ಶಾಸಕರ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಬೆಂಗಳೂರು[ಜು. 21] ರಾಜ್ಯ ರಾಜಕಾರಣ ಕ್ರಿಕೆಟ್ ಪಂದ್ಯಕ್ಕಿಂತಲೂ ರೋಚಕತೆ ಪಡೆದುಕೊಂಡಿದೆ. ಚೇಸಿಂಗ್ ನಡೆಸುತ್ತಿರುವ ದೋಸ್ತಿ ಪಡೆಯ ನಾಯಕರು ಅತೃಪ್ತರ ಮನವೊಲಿಕೆಗೆ ಕಸರತ್ತು ಮುಂದುವರಿಸಿಯೇ ಇದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಇದೀಗ  ಆನಂದ್ ಸಿಂಗ್ ಅಕ್ಕನ ಮನೆಗೆ ಭೇಟಿ ನೀಡಿದ್ದಾರೆ. ಸಹಕಾರನಗರದಲ್ಲಿರುವ ಆನಂದ್ ಸಿಂಗ್ ಅಕ್ಕನ ಮನೆಗೆ ಸಿದ್ದರಾಮಯ್ಯ ಕೊನೆ ಕ್ಷಣದಲ್ಲಿ ತೆರಳಿರುವುದು ಕುತೂಹಲ ಮೂಡಿಸಿದೆ.

‘ಬರಲು ರೆಡಿ ಇದ್ದಾರೆ’ ವಿಶ್ವಾಸಕ್ಕೂ ಮುನ್ನ JDS ಶಾಸಕನ ಹೇಳಿಕೆ ತಂದ ಸಂಚಲನ

ಬೆಂಗಾವಲು ವಾಹನ ಬಿಟ್ಟು ಸಿದ್ದರಾಮಯ್ಯ ಬಂದಿರುವುದು ಸಹ  ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣ ಮಾಡಿಕೊಟ್ಟಿದೆ. ಮೊಟ್ಟ ಮೊದಲಿಗರಾಗಿ ಎರಡನೇ ಕಂತಿನಲ್ಲಿ ರಾಜೀನಾಮೆ ಕೊಟ್ಟಿದ್ದ ವಿಜಯನಗರ ಶಾಸಕ ಆನಂದ್ ಸಿಂಗ್ ಎಲ್ಲಿದ್ದಾರೆ? ಎಂಬ ಮಾಹಿತಿ ಪಡೆದುಕೊಳ್ಳಲು ಸಿದ್ದರಾಮಯ್ಯ ಆಗಮಿಸಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದ ಗಡಿ ಆನೇಕಲ್‌ನಲ್ಲಿ ದರ್ಶನ್ 'ಡೆವಿಲ್‌'ಗೆ ಹೀಗೆಲ್ಲಾ ಆಗ್ತಿದ್ಯಾ?
ಈ ವರ್ತನೆ ಸರಿಯಲ್ಲ, ಹೈಕೋರ್ಟ್ ಪರಿಗಣಿಸುವ ಮೊದಲು ಕ್ಷಮೆ ಮುಖ್ಯ, ಪ್ರಜ್ವಲ್ ರೇವಣ್ಣ ಅರ್ಜಿಗೆ ಸುಪ್ರೀಂ ಕೆಂಡ!