
ಬೆಂಗಳೂರು, [ಅ.30]: ಉಪಚುನಾವಣೆ ಹಿನ್ನೆಲೆಯಲ್ಲಿ ನವೆಂಬರ್ 3ರಂದು 5 ಕ್ಷೇತ್ರಗಳಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಿ ಇಂದು [ಮಂಗಳವಾರ] ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ..
ಬಳ್ಳಾರಿ, ಶಿವಮೊಗ್ಗ, ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದೆ. ಇದ್ರಿಂದ ಈ ಐದು ಕ್ಷೇತ್ರಗಳ ವ್ಯಾಪ್ತಿಗೆ ಬರುವ ಸರ್ಕಾರಿ ಶಾಲಾ-ಕಾಲೇಜು, ಖಾಸಗಿ, ಅನುದಾನಿತ ಶಾಲೆ ಹಾಗೂ ಸರ್ಕಾರಿ ಕಚೇರಿ ಹಾಗೂ ಖಾಸಗಿ ಕಂಪನಿಗಳಿಗೆ ನ.03ರಂದು ರಜೆ ಘೋಷಣೆ ಮಾಡಿದೆ.
ನವೆಂಬರ್ 2, 3 ರಂದು ಶಾಲೆಗಳಿಗೆ ರಜೆ ಘೋಷಣೆ
ಶ್ರೀರಾಮುಲು ಅವರ ರಾಜೀನಾಮೆಯಿಂದ ಬಳ್ಳಾರಿ ಲೋಕಸಭೆಗೆ ಉಪಚುನಾವಣೆ ನಡೆಯಲಿದೆ. ಇನ್ನು ಶಿವಮೊಗ್ಗಕ್ಕೆ ಬಿಎಸ್ ಯಡಿಯೂರಪ್ಪ ಹಾಗೂ ಮಂಡ್ಯ ಲೋಕಸಭಾ ಸದಸ್ಯ ಸ್ಥಾನಕ್ಕೆ ಪುಟ್ಟರಾಜು ರಾಜೀನಾಮೆ ನೀಡಿದ್ದಾರೆ.
ನವೆಂಬರ್ನಲ್ಲಿ 11 ದಿನ ಬ್ಯಾಂಕ್ ರಜಾ: ಪ್ಲ್ಯಾನ್ ಇಲ್ದಿದ್ರೆ ಕೆಡಲಿದೆ ಮಜಾ!
ಇನ್ನು ಸಿದ್ದು ನ್ಯಾಮೇಗೌಡ ಅಕಾಲಿಕ ಮರಣದಿಂದ ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದರೆ, ಸಿಎಂ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ರಾಮನಗರ ವಿಧಾನಸಭೆ ಕ್ಷೇತ್ರಕ್ಕೆ ಇದೇ ನವೆಂಬರ್ 3ರಂದು ಮತದಾನ ನಡೆಯಲಿದೆ. ನವೆಂಬರ್ 6ರಂದು ಈ ಎಲ್ಲಾ ಉಪಚುನಾವಣೆಯ ಮತ ಎಣಿಕೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.