ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಸರ್ಕಾರ: ಸಿಂಗಂ ’ಅಣ್ಣಾಮಲೈ’ ವರ್ಗಾವಣೆ ರದ್ದು

Published : Feb 21, 2019, 03:02 PM ISTUpdated : Feb 21, 2019, 03:12 PM IST
ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಸರ್ಕಾರ: ಸಿಂಗಂ ’ಅಣ್ಣಾಮಲೈ’ ವರ್ಗಾವಣೆ ರದ್ದು

ಸಾರಾಂಶ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ | ಬೆಂಗಳೂರು ದಕ್ಷಿಣ ಡಿಸಿಪಿ ಅಣ್ಣಾಮಲೈ ವರ್ಗಾವಣೆಗೆ ಸಾರ್ವಜನಿಕ ಆಕ್ರೋಶ | ಅಣ್ಣಾಮಲೈ ವರ್ಗಾವಣೆ ರದ್ದುಗೊಳಿಸಿದ ಸರ್ಕಾರ 

ಬೆಂಗಳೂರು (ಫೆ. 21): ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯದ ಸಮ್ಮಿಶ್ರ ಸರ್ಕಾರ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ ಮಾಡಿದೆ.

ಐಪಿಎಸ್‌ಗೆ ಭಾರೀ ಸರ್ಜರಿ : ಅಣ್ಣಾಮಲೈ ಸೇರಿ 29 ಅಧಿಕಾರಿಗಳ ವರ್ಗ

ಖಡಕ್‌ ಐಪಿಎಸ್‌ ಅಧಿಕಾರಿ ಎಂದೇ ಖ್ಯಾತಿವೆತ್ತ ಬೆಂಗಳೂರು ದಕ್ಷಿಣ ವಲಯ ಡಿಸಿಪಿ ಅಣ್ಣಾಮಲೈ ಸೇರಿದಂತೆ 29 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ ಅಣ್ಣಾಮಲೈಗೆ ಯಾವುದೇ ಹುದ್ದೆಯನ್ನು ತೋರಿಸಿರಲಿಲ್ಲ. 
ಅಣ್ಣಾಮಲೈ ವರ್ಗಾವಣೆಗೆ ಸಾರ್ವಜನಿಕ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಸರ್ಕಾರ ಅವರ ವರ್ಗಾವಣೆಯನ್ನು ರದ್ದುಗೊಳಿಸಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಅವರು ದಕ್ಷಿಣ ವಲಯ ಡಿಸಿಪಿಯಾಗಿಯೇ ಮುಂದುವರೆಯಲಿದ್ದಾರೆ ಎಂದು ಸಿಎಂ  ಹೇಳಿದ್ದಾರೆ. 

DCP ಅಣ್ಣಾಮಲೈ ದಿಟ್ಟ ಕ್ರಮ: ಒಂದೇ ಬಾರಿ 71 ಪೊಲೀಸ್ ಸಿಬ್ಬಂದಿ ಎತ್ತಂಗಡಿ

ಬೆಂಗಳೂರಿನ ದಕ್ಷಿಣ ವಲಯ ಡಿಸಿಪಿ ಆಗಿ ನಿಯೋಜಿತರಾಗಿದ್ದ ಇಶಾ ಪಂಥ್ ಗೆ ಆಗ್ನೇಯ ವಿಭಾಗದ ಡಿಸಿಪಿ ಸ್ಥಾನ ನೀಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣ: ಶಿಕ್ಷಕ ಬೀರಪ್ಪ ಅಂಡಗಿ ಮಾದರಿ ಕಾರ್ಯ
ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟ: ಎನ್‌ಐಎ ಭೇಟಿ, ತನಿಖೆ ತೀವ್ರ