
ಬೆಂಗಳೂರು[ಜೂನ್ 15] ಸಾಲ ಮನ್ನಾಕ್ಕೆ ಯಡಿಯೂರಪ್ಪ ದಿನ ನಿಗದಿ ಮಾಡಿದರೆ ಹೇಗೆ ಎಂದು ಸಣ್ಣ ಕೈಗಾರಿಕಾ ಸಚಿವ ಶ್ರೀನಿವಾಸ್ ಪ್ರಶ್ನೆ ಮಾಡಿದ್ದಾರೆ.ರಾಜ್ಯ ಸರಕಾರ ರೈತರಿಗೆ ನೀಡಿದ ಮಾತನ್ನು ತಪ್ಪುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹೀಗಾಗಿ ಹೋರಾಟ ಎಂಬ ಹೆಸರಿನಲ್ಲಿ ಗೊಂದಲ ಸೃಷ್ಟಿಸುವ ಯತ್ನ ಮಾಡುತ್ತಿದ್ದಾರೆ ಸಾಲ ಮನ್ನಾ ಏಕಾ ಏಕಿ ಮಾಡೋದು ಅಷ್ಟು ಸುಲಭನಾ? ಎಂದರು.
ಸಾಲ ಮನ್ನಾಕ್ಕೆ ರಾಜ್ಯ ಬಜೆಟ್ ನ ಅರ್ಧದಷ್ಟು ಹಣ ಹೊಂದಿಸಬೇಕು. 50 ಸಾವಿರ ಕೋಟಿ ಸಾಲ ಮನ್ನಾ ಮಾಡಬೇಕು. ಅದಕ್ಕೆ ಸಂಪನ್ಮೂಲಗಳ ಕ್ರೋಢಿಕರಣ ಆಗಬೇಕು ಎಂದು ಹೇಳಿದರು. ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ಆಗಿದೆ. ಸರಕಾರ ಸಾಲ ಮನ್ನಾ ಮಾಡುವ ಮಾತಿಗೆ ಬದ್ಧವಾಗಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.