ತೆರಿಗೆ ಕಟ್ಟದಿದ್ರೆ ಇವೆಲ್ಲವೂ ಕಟ್ : ಸರ್ಕಾರ ನಿರ್ಧಾರ

Published : Aug 09, 2018, 12:39 PM ISTUpdated : Aug 09, 2018, 12:47 PM IST
ತೆರಿಗೆ ಕಟ್ಟದಿದ್ರೆ ಇವೆಲ್ಲವೂ ಕಟ್ : ಸರ್ಕಾರ ನಿರ್ಧಾರ

ಸಾರಾಂಶ

ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ) ಪಡೆದರೂ ಆಸ್ತಿ ತೆರಿಗೆ ಪಾವತಿಸದೆ ಇರುವ ಕಾರಣ ಬಿಬಿಎಂಪಿಗೆ ವಾರ್ಷಿಕವಾಗಿ 200 ಕೋಟಿ ರು. ನಷ್ಟವಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷ ನೂರಾರು ಕಟ್ಟಡಗಳು ನಿರ್ಮಾಣಗೊಳ್ಳುತ್ತಿದ್ದು, ಆಸ್ತಿ ತೆರಿಗೆ ಸಂಗ್ರಹಣೆ ಮಾತ್ರ ಹೆಚ್ಚಾಗುತ್ತಿಲ್ಲ.

ಬೆಂಗಳೂರು(ಆ.09): ಬಿಬಿಎಂಪಿಗೆ ಆಸ್ತಿ ತೆರಿಗೆ ನೀಡದೇ ವಂಚಿಸುವುದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ, ಜಲ ಮಂಡಳಿ ಸೇವೆ ನೀಡುವ ಮುನ್ನ ಆಸ್ತಿ ತೆರಿಗೆ ಪಾವತಿ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ) ಪಡೆದುಕೊಳ್ಳುವಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಗೆ (ಬೆಸ್ಕಾಂ), ಬೆಂಗಳೂರು ಜಲಮಂಡಳಿಗೆ ಸೂಚನೆ ನೀಡಿದೆ.

ಸ್ವಾಧೀನಾನುಭವ ಪ್ರಮಾಣ ಪತ್ರ (ಒಸಿ) ಪಡೆದರೂ ಆಸ್ತಿ ತೆರಿಗೆ ಪಾವತಿಸದೆ ಇರುವ ಕಾರಣ ಬಿಬಿಎಂಪಿಗೆ ವಾರ್ಷಿಕವಾಗಿ 200 ಕೋಟಿ ರು. ನಷ್ಟವಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷ ನೂರಾರು ಕಟ್ಟಡಗಳು ನಿರ್ಮಾಣಗೊಳ್ಳುತ್ತಿದ್ದು, ಆಸ್ತಿ ತೆರಿಗೆ ಸಂಗ್ರಹಣೆ ಮಾತ್ರ ಹೆಚ್ಚಾಗುತ್ತಿಲ್ಲ.

ಈ ಕುರಿತು ಕಳೆದ ಕೆಲ ದಿನಗಳ ಹಿಂದೆ ಮುಖ್ಯ ಕಾರ್ಯದರ್ಶಿಗಳ ಜತೆಗೆ ನಡೆದ ಸಭೆಯಲ್ಲಿ ಬಿಬಿಎಂಪಿ ಆಯುಕ್ತರು ಈ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳು ಇನ್ನು ಮುಂದೆ ಕಟ್ಟಡಗಳ ಒಸಿ ಜತೆಗೆ ಆಸ್ತಿ ತೆರಿಗೆ ಪಾವತಿಸಿದ ದಾಖಲೆ ನೀಡಿದರಷ್ಟೆ ಬೆಸ್ಕಾಂ ಮತ್ತು ಜಲಮಂಡಳಿ ಸೇವೆಗಳನ್ನು ಒದಗಿಸುವಂತೆ ಆಯಾ ಇಲಾಖೆಗಳ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 2017-18ನೇ ಸಾಲಿನಲ್ಲಿ 160 ಕಟ್ಟಡಗಳ 23,232 ಆಸ್ತಿಗಳಿಗೆ (ಫ್ಲ್ಯಾಟ್ಸ್ ) ಒಸಿ ನೀಡಲಾಗಿದೆ. ಆ ಪೈಕಿ ಕೇವಲ 4 ಕಟ್ಟಡಗಳ 761  ಆಸ್ತಿಗಳು ಮಾತ್ರ ತೆರಿಗೆ ಪಾವತಿಸಿವೆ. ಉಳಿದ 156 ಕಟ್ಟಡಗಳ 22,471 ಆಸ್ತಿಗಳು ಈವರೆಗೆ ಒಸಿ ಪಡೆದು ತೆರಿಗೆ ಪಾವತಿಸಿಲ್ಲ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಆಯುಕ್ತ ಮಂಜುನಾಥ್ ಪ್ರಸಾದ್, ಆಸ್ತಿ ಮಾಲೀಕರು ಒಸಿ ಅಥವಾ ವಿದ್ಯುತ್ ಸಂಪರ್ಕ ಯಾವುದು ಮೊದಲು ಪಡೆಯುತ್ತಾರೆಯೋ ಆ ದಿನಾಂಕದಿಂದಲೇ ಅವರು ತೆರಿಗೆ ಪಾವತಿಸಬೇಕಾಗುತ್ತದೆ. ಆದರೆ, ಹಲವು ಕಟ್ಟಡಗಳು ಒಸಿ ಪಡೆದು ನಂತರ ತೆರಿಗೆ ಪಾವತಿಸುತ್ತಿಲ್ಲ. ಇನ್ನು ಮುಂದೆ ಬೆಸ್ಕಾಂನಿಂದ ವಿದ್ಯುತ್ ಸಂಪರ್ಕ ಪಡೆಯಬೇಕೆಂದರೆ ಒಸಿ ಜತೆಗೆ ತೆರಿಗೆ ಪಾವತಿ ರಶೀದಿಯನ್ನು ನೀಡಬೇಕು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!