
ಬೆಂಗಳೂರು, [ಅ.20]: ರಾಜ್ಯದಲ್ಲಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವು ಮತ್ತೊಂದು ಸಾಲ ಮನ್ನಾಕ್ಕೆ ಮುಂದಾಗಿದೆ.
ದಲಿತರ ಮನವೊಲಿಕೆಗೆ ಮುಂದಾಗಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪರಿಶಿಷ್ಟ ಜಾತಿ [ಎಸ್ ಸಿ] ಮತ್ತು ಪರಿಶಿಷ್ಟ ಪಂಗಡ [ಎಸ್. ಟಿ] ವಿದ್ಯಾರ್ಥಿಗಳ ಶೈಕ್ಷಣಿಕ ಸಾಲಮನ್ನಾ ಮಾಡುವುದಕ್ಕೆ ಚಿಂತನೆ ನಡೆಸಿದ್ದಾರೆ.
ಇದಕ್ಕೆ ಪೂರಕವೆಂಬಂತೆ ರಾಜ್ಯದಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್ ಸೇರಿದಂತೆ ಎಲ್ಲಾ ವಿಧದ ಬ್ಯಾಂಕ್ ಗಳಿಂದ ಪಡೆದಿರುವ ಶೈಕ್ಷಣಿಕ ಸಾಲ ಬಗ್ಗೆ ಸಮರ್ಪಕ ಮಾಹಿತಿ ನೀಡುವಂತೆ ಈಗಾಗಲೇ ಸಮಾಜಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಮಾಹಿತಿ ಪಡೆದುಕೊಂಡ ಬಳಿಕ ಸಾಲಮನ್ನಾ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಿದ್ದು, ಬಳಿಕ ಸಮಾಜಕಲ್ಯಾಣ ಇಲಾಖೆಯಿಂದ ಶೈಕ್ಷಣಿಕ ಸಾಲ ಮನ್ನಾಕ್ಕೆ ಆಡಳಿತಾತ್ಮಕ ಪ್ರಕ್ರಿಯೆ ಆರಂಭವಾಗಲಿದೆ.
ಈಗಾಗಲೇ ಬೆಳೆ ಸಾಲ ಮನ್ನಾ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಇನ್ನು ಹಣ ಬಿಡುಗಡೆಯಾಗಿಲ್ಲ. ಹೀಗಾಗಿ ಫಲಾನುಭವಿ ರೈತರು ತಮ್ಮ ಸಾಲ ಮನ್ನಾ ಆಗುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ.
ಇದಕ್ಕಾಗಿ ಸಿಎಂ ಕುಮಾರಸ್ವಾಮಿ ಅವರು ಬೇರೆ ಬೇರೆ ಮೂಲಗಳಿಂದ ಬರುವ ಆದಾಯವನ್ನು ರೈತರ ಸಾಲ ಮನ್ನಾಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಆದ್ರೆ, ಈಗ ಮತ್ತೊಂದು ಸಾಲ ಮನ್ನಾಕ್ಕೆ ಮುಂದಾಗಿದ್ದು, ಯಾವ ಆದಾಯದಿಂದ ಹಣ ಜೋಡಿಸುತ್ತಾರೋ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.