11 ಐಪಿಎಸ್ ಅಧಿಕಾರಿಗಳ ವರ್ಗಾವಣೆ; ನೂತನ ಎಡಿಜಿಪಿಯಾಗಿ ಕಮಲ್‌ಪಂತ್‌ ನಿಯೋಜನೆ

Published : Aug 02, 2019, 10:03 AM IST
11 ಐಪಿಎಸ್ ಅಧಿಕಾರಿಗಳ ವರ್ಗಾವಣೆ; ನೂತನ ಎಡಿಜಿಪಿಯಾಗಿ ಕಮಲ್‌ಪಂತ್‌ ನಿಯೋಜನೆ

ಸಾರಾಂಶ

ಎಚ್‌ಡಿಕೆ ಆಪ್ತ ಪೊಲೀಸರು ಎತ್ತಂಗಡಿ | 11 ಐಪಿಎಸ್‌ಗಳ ವರ್ಗಾವಣೆ | ಗುಪ್ತದಳಕ್ಕೆ ಕಮಲ್‌ ಪಂತ್‌ |  ರವಿಕಾಂತೇಗೌಡ, ದೇವರಾಜ್‌, ನಿಂಬಾಳ್ಕರ್‌ಗೆ ಹುದ್ದೆ ಇಲ್ಲ

ಬೆಂಗಳೂರು (ಆ. 02): ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೊಲೀಸ್‌ ಇಲಾಖೆಯಲ್ಲಿನ ಆಯಕಟ್ಟಿನ ಸ್ಥಳಗಳಲ್ಲಿನ 11 ಐಪಿಎಸ್‌ ಹುದ್ದೆಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದ್ದು, ಹಿಂದಿನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಆಪ್ತರಾಗಿದ್ದ ಕೆಲವು ಅಧಿಕಾರಿಗಳಿಗೆ ಎತ್ತಂಗಡಿ ಭಾಗ್ಯ ಕಲ್ಪಿಸಿದೆ.

ಪ್ರಮುಖವಾಗಿ ಮುಖ್ಯಮಂತ್ರಿಗಳ ಬಳಿ ಇರುವ ಗುಪ್ತಚರ ಇಲಾಖೆ ಮುಖ್ಯಸ್ಥರನ್ನು ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ ಗುಪ್ತಚರ ಇಲಾಖೆ ನೂತನ ಎಡಿಜಿಪಿಯಾಗಿ ಕಮಲ್‌ಪಂತ್‌ ಅವರನ್ನು ನಿಯೋಜಿಸಿದೆ. ಈ ಹುದ್ದೆಯಲ್ಲಿದ್ದ ಐಜಿಪಿ ದಯಾನಂದ ಅವರನ್ನು ಕೆಎಸ್‌ಆರ್‌ಪಿಗೆ ವರ್ಗಾವಣೆಗೊಳಿಸಲಾಗಿದೆ. ರಾಜ್ಯದ ಕಾನೂನು- ಸುವ್ಯವಸ್ಥೆ ಎಡಿಜಿಪಿಯಾಗಿ ಡಾ. ಅಮರ್‌ ಕುಮಾರ್‌ ಪಾಂಡೆ ಅವರನ್ನು ನೇಮಕ ಮಾಡಿದೆ.

ಇನ್ನು ನಿರೀಕ್ಷೆಯಂತೆ ಈ ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬೆಂಗಳೂರು ಅಪರಾಧ ವಿಭಾಗದ (ಸಿಸಿಬಿ) ಜಂಟಿ ಪೊಲೀಸ್‌ ಆಯುಕ್ತ ಬಿ.ಆರ್‌.ರವಿಕಾಂತೇಗೌಡ ಹಾಗೂ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ದೇವರಾಜ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರಿಬ್ಬರಿಗೂ ಯಾವುದೇ ಹುದ್ದೆ ತೋರಿಸಿಲ್ಲ.

ಮುಖ್ಯಮಂತ್ರಿ ತವರು ಜಿಲ್ಲೆಯ ಶಿವಮೊಗ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೂಡ ಬದಲಾಗಿದ್ದು, ಆ ಹುದ್ದೆಗೆ ಗುಪ್ತಚರ ವಿಭಾಗದ ಡಿಸಿಪಿಯಾಗಿದ್ದ ಕೆ.ಎಂ.ಶಾಂತರಾಜು ಅವರನ್ನು ನಿಯುಕ್ತಿಗೊಳಿಸಲಾಗಿದೆ. ಅಲ್ಲದೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ತವರು ಜಿಲ್ಲೆ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಡಾ.ಅನೂಪ್‌ ಶೆಟ್ಟಿನೇಮಕಗೊಂಡಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆಯಷ್ಟೇ ಭ್ರಷ್ಟಾಚಾರ ನಿಗ್ರಹ ದಳ ಐಜಿಪಿಯಾಗಿ ನೇಮಕಗೊಂಡಿದ್ದ ಹೇಮಂತ್‌ ನಿಂಬಾಳ್ಕರ್‌ ಅವರ ಸ್ಥಳಕ್ಕೆ ಈ ಹಿಂದೆ ಐಜಿಪಿಯಾಗಿದ್ದ ಎಂ.ಚಂದ್ರಶೇಖರ್‌ ಅವರನ್ನೇ ಮತ್ತೆ ನೇಮಿಸಲಾಗಿದೆ. ಆದರೆ, ನಿಂಬಾಳ್ಕರ್‌ ಅವರಿಗೆ ಯಾವುದೇ ಹುದ್ದೆ ನೀಡಿಲ್ಲ.

ಬೆಂಗಳೂರಿನ ಎರಡು ಪ್ರಮುಖ ಹುದ್ದೆಗಳನ್ನು ಬದಲಾವಣೆ ಮಾಡಿರುವ ಸರ್ಕಾರ ಬೆಂಗಳೂರು ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಹುದ್ದೆಗೆ ಮಂಗಳೂರು ಪೊಲೀಸ್‌ ಕಮಿಷನರ್‌ ಆಗಿದ್ದ ಸಂದೀಪ್‌ ಪಾಟೀಲ್‌ ಹಾಗೂ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯನ್ನಾಗಿ ಡಾ.ಚೇತನ್‌ಸಿಂಗ್‌ ರಾಥೋಡ್‌ ಅವನ್ನು ನೇಮಿಸಿದೆ.

ಉಳಿದಂತೆ ಮಂಗಳೂರು ಪೊಲೀಸ್‌ ಕಮಿಷನರ್‌ ಆಗಿ ಡಾ.ಎ.ಸುಬ್ರಮಣ್ಯ ರಾವ್‌, ದಾವಣಗೆರೆ ಎಸ್ಪಿಯಾಗಿ ಹನುಮಂತರಾಯಪ್ಪ ಹಾಗೂ ವಾರ್ತೆ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಎನ್‌.ಸಿದ್ದರಾಮಪ್ಪ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!