
ಬೆಂಗಳೂರು, [ಸೆ.06]: ಸಚಿವ ಸ್ಥಾನ ಸಿಗದಿದ್ದಕ್ಕೆ ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ಮುನಿಸಿಕೊಂಡಿದ್ದ ಶಾಸಕ ಎಂ.ಪಿ.ರೇಣುಕಾರ್ಚಾ ಅವರಿಗೆ ಕೊನೆಗೂ ಸಚಿವ ಸಂಪುಟ ಸ್ಥಾನಮಾನದ ಹುದ್ದೆ ನೀಡಲಾಗಿದೆ.
ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ರೇಣುಕಾಚಾರ್ಯ ಅವರನ್ನು ನೇಮಕ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಇಂದು [ಶುಕ್ರವಾರ] ಆದೇಶ ಹೊರಡಿಸಿದೆ.
ಸಂಪುಟ ದರ್ಜೆ ಸ್ಥಾನಮಾನದೊಂದಿಗೆ, ಸಂಪುಟ ದರ್ಜೆಯ ಸಚಿವರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಆದೇಶಿಸಿದೆ.
ಬಿಎಸ್ ವೈ ಸಂಪುಟದಲ್ಲಿ ಮಂತ್ರಿಗಿರಿ ಸಿಗದಿದಕ್ಕೆ ಮುನಿಸಿಕೊಂಡಿದ್ದ ರೇಣುಕಾಚಾರ್ಯ ಅವರು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದರು. ಆದ್ರೆ ಇದೀಗ ಸಂಪುಟ ದರ್ಜೆಯ ಸ್ಥಾನಮಾನ ಹುದ್ದೆ ನೀಡಿ ಅವರನ್ನು ಸಮಾಧಾನಪಡಿಸಲಾಗಿದೆ.
ಸಾಮಾನ್ಯವಾಗಿ ಸಿಎಂ ಅವರು ತಮ್ಮ ರಾಜಕೀಯ ಕಾರ್ಯದರ್ಶಿಯನ್ನಾಗಿ ತಮ್ಮದೇ ಪಕ್ಷದ ಶಾಸಕರೊಬ್ಬರನ್ನು ನೇಮಿಸಿಕೊಳ್ಳುವುದು ಹಿಂದಿನಿಂದಲೂ ಬಂದಿರುವ ಪರಿಪಾಠವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.