ಭಾರತ್ ಬಂದ್ : ಬಸ್ ಸೇವೆ ಇದೆಯಾ..? ಸರ್ಕಾರ ಬೆಂಬಲಿಸುತ್ತಾ..?

Published : Jan 07, 2019, 12:49 PM IST
ಭಾರತ್ ಬಂದ್ : ಬಸ್ ಸೇವೆ ಇದೆಯಾ..? ಸರ್ಕಾರ ಬೆಂಬಲಿಸುತ್ತಾ..?

ಸಾರಾಂಶ

ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ನಿಟ್ಟಿನಲ್ಲಿ ಹಲವು ಸೇವೆಗಳು ವ್ಯತ್ಯಯವಾಗಲಿದೆ. ಅಲ್ಲದೇ ಬಂದ್ ಗೆ ರಾಜ್ಯ ಸರ್ಕಾರ ಬೆಂಬಲ ನೀಡಿದೆ. 

ಮಂಡ್ಯ :  ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿ ಯು) ಬಂದ್ ಕರೆ ನೀಡಿದ್ದು,  ಕೇಂದ್ರದ ವಿರುದ್ಧ ಕರೆ ನೀಡಿರುವ ಬಂದ್ ಗೆ ರಾಜ್ಯ ಸರ್ಕಾರದ ಬೆಂಬಲವಿದೆ ಎಂದು ಪರೋಕ್ಷವಾಗಿ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ. 

ನಾಳೆ ಭಾರತ್ ಬಂದ್ : ಶಾಲಾ-ಕಾಲೇಜುಗಳಿಗೆ ಇರುತ್ತಾ ರಜೆ..?

ನಾಳೆ ಕೇಂದ್ರ ಸರ್ಕಾರದ ವಿರುದ್ಧ ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ.  ಕಾರ್ಮಿಕರ ಹಿತದೃಷ್ಟಿಯಿಂದ ಅಖಿಲ ಭಾರತ ಬಂದ್ಗೆ ಕರೆ ನೀಡಲಾಗಿದೆ.  ನೌಕರರ ಬಂದ್ ಗೆ ನಾವು ಸಹಕಾರ ನೀಡುತ್ತೇವೆ ಎಂದು ಸಚಿವರು ಹೇಳಿದ್ದಾರೆ. 

ಭಾರತ್ ಬಂದ್ : ಓಲಾ, ಊಬರ್ ಸೇವೆ ಇರುತ್ತಾ..?

ಬಂದ್ ಹಿನ್ನೆಲೆಯಲ್ಲಿ ನಾಳೆ  KSRTC ಬಸ್ ಇರುವುದಿಲ್ಲ. ಆದರೆ ಪರಿಸ್ಥಿತಿ ನೋಡಿಕೊಂಡು ಬಸ್ ಸಂಚಾರಕ್ಕೆ ಅನುವು ಮಾಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಡಿಸಿ ತಮ್ಮಣ್ಣ ಹೇಳಿದ್ದಾರೆ. 

ಈಗಾಗಲೇ ಭಾರತ್ ಬಂದ್ ಹಿನ್ನೆಲೆಯಲ್ಲಿ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ. ಶಾಲಾ ಕಾಲೇಜುಗಳಿಗೂ ಕೂಡ ರಜೆ ಘೋಷಣೆ ಮಾಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ