ರಾಜೀವ್ ಗಾಂಧಿ ಹೆಸರಲ್ಲಿ ಪೀಠ ಸ್ಥಾಪನೆಗೆ ಮುಂದಾದ ಸರ್ಕಾರ; ಹೈ ಕಮಾಂಡ್ ಮನಗೆಲ್ಲಲು ಹೊರಟರಾ ಸಿದ್ದರಾಮಯ್ಯ?

Published : Oct 23, 2017, 08:29 PM ISTUpdated : Apr 11, 2018, 12:57 PM IST
ರಾಜೀವ್ ಗಾಂಧಿ ಹೆಸರಲ್ಲಿ ಪೀಠ ಸ್ಥಾಪನೆಗೆ ಮುಂದಾದ ಸರ್ಕಾರ; ಹೈ ಕಮಾಂಡ್ ಮನಗೆಲ್ಲಲು ಹೊರಟರಾ ಸಿದ್ದರಾಮಯ್ಯ?

ಸಾರಾಂಶ

ಚುನಾವಣಾ ವರ್ಷದಲ್ಲಿ ರಾಜ್ಯ ಸರ್ಕಾರ ಈಗ ಮತಬ್ಯಾಂಕ್​ ಕ್ರೋಢೀಕರಣದ ಹೆಜ್ಜೆ ಇಟ್ಟಿದೆ. ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಪೀಠ ಸ್ಥಾಪನೆಗೆ ಮುಂದಾಗಿದೆ. ಈ ಮಧ್ಯೆ ಪೀಠ ಸ್ಥಾಪನೆಯ ಮೂಲಕ ಸಿಎಂ ಸಿದ್ಧರಾಮಯ್ಯ ಕಾಂಗ್ರೆಸ್​ ಹೈಕಮಾಂಡ್​ ಮನಗೆಲ್ಲಲು ಹೊರಟಿದ್ದಾರಾ ಎಂಬ ಪ್ರಶ್ನೆಯೂ ಉದ್ಭವಿಸಿದೆ.

ಬೆಂಗಳೂರು (ಅ.23): ಚುನಾವಣಾ ವರ್ಷದಲ್ಲಿ ರಾಜ್ಯ ಸರ್ಕಾರ ಈಗ ಮತಬ್ಯಾಂಕ್​ ಕ್ರೋಢೀಕರಣದ ಹೆಜ್ಜೆ ಇಟ್ಟಿದೆ. ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಪೀಠ ಸ್ಥಾಪನೆಗೆ ಮುಂದಾಗಿದೆ. ಈ ಮಧ್ಯೆ ಪೀಠ ಸ್ಥಾಪನೆಯ ಮೂಲಕ ಸಿಎಂ ಸಿದ್ಧರಾಮಯ್ಯ ಕಾಂಗ್ರೆಸ್​ ಹೈಕಮಾಂಡ್​ ಮನಗೆಲ್ಲಲು ಹೊರಟಿದ್ದಾರಾ ಎಂಬ ಪ್ರಶ್ನೆಯೂ ಉದ್ಭವಿಸಿದೆ.

ಚುನಾವಣಾ ವರ್ಷದಲ್ಲಿ ರಾಜ್ಯ ಸರ್ಕಾರ ಮಾಜಿ ಪ್ರಧಾನಿ ರಾಜೀವ ಗಾಂಧಿ ಪೀಠ ಸ್ಥಾಪನೆಗೆ ಹೊರಟಿದೆ. ಹತ್ತು ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ​ ಇನ್​​ಸ್ಟಿಟ್ಯೂಟ್​ ಆಫ್​ ಸೋಶಿಯಲ್​ ಸೈನ್ಸ್​ ಆವರಣದಲ್ಲಿ ಸ್ಥಾಪಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು, ಹಣ ಒದಗಿಸುವಂತೆ ಸಿಎಂ ಸಚಿವಾಲಯ ಗ್ರಾಮೀಣಾಭಿವೃದ್ಧಿ ಇಲಾಖೆಯನ್ನು ಕೋರಿದೆ. ಆದರೆ ನಮ್ಮ ಇಲಾಖೆಗೆ ಅಗತ್ಯವಿರುವಷ್ಟು ಪೂರೈಸುವಷ್ಟು ಹಣ ಇಲ್ಲ ಎಂದು ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಇಲಾಖೆ ಕೊನೆಗೂ ಸಿಎಂ ಕಚೇರಿ ಒತ್ತಡದಿಂದಾಗಿ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದರೆ ತನ್ನದೇನೂ ಅಭ್ಯಂತರವಿಲ್ಲ ಎಂದು ಹೇಳಿದೆ.  ಆದರೆ  ಸಿಎಂ ಕಚೇರಿ ಕಳುಹಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಿರುವ ಹಣಕಾಸು ಇಲಾಖೆ ಕಡತವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕಳುಹಿಸಿದೆ. ಹೀಗಾಗಿ ಈಗ ರಾಜೀವ್​ ಗಾಂಧಿ ಪೀಠಕ್ಕೆ ಹಣ ನೀಡಬೇಕಾದ ಜವಾಬ್ದಾರಿ ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೆಗಲೇರಿದೆ.  ಆದರೆ ಈಗಾಗಲೇ ರಾಜ್ಯದಲ್ಲಿ ಮಾಜಿ ಪ್ರಧಾನಿ ದಿ. ರಾಜೀವ್​ ಗಾಂಧಿ ಹೆಸರಿನಲ್ಲಿ ಸಾಕಷ್ಟು ಯೋಜನೆಗಳು ಮತ್ತು ಸಂಸ್ಥೆಗಳು ಇರುವುದರಿಂದ ಮತ್ತೆ ಪೀಠ ಸ್ಥಾಪನೆಯ ಅವಶ್ಯಕತೆ ಇದೆಯಾ ಎಂಬ ಪ್ರಶ್ನೆ ಉದ್ಭವಿಸಿದೆ. ಇನ್ನೊಂದೆಡೆ ಚುನಾವಣಾ ವರ್ಷದಲ್ಲಿ  ಹೈಕಮಾಂಡ್​ ಮನಗೆಲ್ಲಲು ಸಿದ್ಧರಾಮಯ್ಯ ಹೊರಟಿದ್ದಾರಾ ಅನ್ನೋ ಅನುಮಾನ ಕೂಡಾ ಕಾಡ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಕ್ಲು ಶಿವ ಕೊಲೆ ಪ್ರಕರಣ: ನಾಪತ್ತೆ ಆಗಿರುವ ಬೈರತಿ ಬಸವರಾಜು ವಿರುದ್ಧ ಲುಕ್ ಔಟ್ ನೋಟಿಸ್
ಜರ್ಮನಿಯಲ್ಲೂ ‘ಮತಚೋರಿ’ ಆರೋಪ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ