
ಬೆಂಗಳೂರು (ಜೂ.15) : ತುಮಕೂರು ಜಿಲ್ಲೆಗೆ ಹೇಮಾವತಿಯಿಂದ ನೀರು ತರುವ ಕಾಲುವೆ ದುಸ್ಥಿತಿಯಲ್ಲಿರುವುದರಿಂದ ನೀರು ಬರುತ್ತಿಲ್ಲ. ಹೀಗಾಗಿ 0-72 ಕಿ.ಮೀ. ಉದ್ದದ ಕಾಲುವೆಯನ್ನು ನವೀಕರಣಗೊಳಿಸಲು 475 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇದರಡಿ ಮೊದಲ ಹಂತದಲ್ಲಿ 225 ಕೋಟಿ ರು. ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಅಲ್ಲದೆ ಹೇಮಾವತಿ ಕಾಲುವೆಯಿಂದ ಕುಣಿಗಲ್ಗೆ ನೀರೊದಗಿಸಲು ಅಗತ್ಯ ಪೈಪ್ಲೈನ್ ಅಳವಡಿಕೆಗೆ 614 ಕೋಟಿ ರು. ಯೋಜನೆಗೆ ಅನುಮೋದನೆ ನೀಡಲಾಗಿದೆ.
ಇದರಡಿ 70 ಕಿ.ಮೀ. ಪೈಪ್ಲೈನ್ ಅಳವಡಿಕೆಯಾಗಲಿದ್ದು, 355 ಕೋಟಿ ರು. ವೆಚ್ಚದಲ್ಲಿ ಮೊದಲ ಹಂತದಲ್ಲಿ 34.5 ಕಿ.ಮೀ. ಉದ್ದದ ಪೈಪ್ಲೈನ್ ಅಳವಡಿಕೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.