
ಬೆಂಗಳೂರು, [ಮೇ.21]: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೂಲೆ ಸೇರಿದ್ದ ಕೆಎಸ್ಆರ್ಟಿಸಿ ಸೇರಿದಂತೆ ಎಲ್ಲ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳ ಪ್ರಸ್ತಾವನೆ ಫೈಲ್ ಸಿಎಂ ಟೇಬಲ್ ಗೆ ಬಂದಿದೆ.
ಕೆಎಸ್ಆರ್ಟಿಸಿ ಸೇರಿದಂತೆ ಎಲ್ಲಾ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಹೆಚ್ಚಿಸಲು ಸಾರಿಗೆ ಸಚಿವ ಸಚಿವ ಡಿ.ಸಿ. ತಮ್ಮಣ್ಣ ಅವರು ಮತ್ತೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಈ ಬಗ್ಗೆ ಮೇ. 9ರಂದು ಸಾರಿಗೆ ಸಚಿವರು ಸಿಎಂ ಭೇಟಿ ಮಾಡಿ ಸಾರಿಗೆ ಸಂಸ್ಥೆಗಳ ಪ್ರಯಾಣ ದರವನ್ನು ಶೇ. 18ರಷ್ಟು ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಿದ್ದು, ಡೀಸೆಲ್ ದರ ಏರಿಳಿತದಿಂದಾಗಿ ಸಾರಿಗೆ ಸಂಸ್ಥೆಗೆ ಈವರೆಗೆ 100 ಕೋಟಿ ರೂ.ನಷ್ಟವಾಗಿದೆ. ಬಸ್ ಪ್ರಯಾಣ ದರ ಏರಿಸದಿದ್ದರೆ ಸಾರಿಗೆ ಸಂಸ್ಥೆಗಳು ನಷ್ಟಕ್ಕೆ ಸಿಲುಕಲಿವೆ. ಹೀಗಾಗಿ ಆದಷ್ಟು ಬೇಗ ಬಸ್ ಪ್ರಯಾಣ ದರ ಹೆಚ್ಚಿಸಲೇಬೇಕೆಂದು ಸಿಎಂ ಕುಮಾರಸ್ವಾಮಿ ಮೇಲೆ ಸಚಿವ ಡಿ.ಸಿ. ತಮ್ಮಣ್ಣ ಒತ್ತಡ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶೇ.18ರ ಬದಲು ಶೇ. 15ರಷ್ಟು ಹೆಚ್ಚಿಸುವ ಕುರಿತು ಸಿಎಂ ತಾತ್ವಿಕ ಸಮ್ಮತಿಸಿದ್ದು, ಮೇ. 25ರ ನಂತರ ದರ ಏರಿಸುವ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆಗಳಿದ್ದು, ಚುನಾವಣೆ ಫಲಿತಾಂಶದ ನಂತರ ಅಂದ್ರೆ ಜೂನ್ 1ರಿಂದ ಬಸ್ ಪ್ರಯಾಣ ದರ ಹೆಚ್ಚಳ ಜಾರಿಗೆ ಬರುವುದು ಬಹುತೇಕ ಖಚಿತ ಎಂದು ಸುವರ್ಣ ನ್ಯೂಸ್ ಗೆ ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ.
ಈ ಹಿಂದೆ ಸಾರಿಗೆ ಇಲಾಖೆ ಪ್ರಯಾಣ ದರ ಏರಿಕೆ ಕುರಿತು ಪ್ರಸ್ತಾವಣೆ ಸಲ್ಲಿಸಿತ್ತು. ಆದ್ರೆ, ಚುನಾವಣೆಗಳ ಕಾರಣ ನೀಡಿ ಮೂರು ಬಾರಿ ಸಿಎಂ ದರ ಏರಿಕೆ ಪ್ರಸ್ತಾವನೆ ತಿರಸ್ಕರಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.