ರಾಜ್ಯ ಸರ್ಕಾರದಿಂದ ಜನರಿಗೆ ಮತ್ತೊಂದು ಹೊಸ ಭಾಗ್ಯ..!

Published : Jan 11, 2018, 12:45 PM ISTUpdated : Apr 11, 2018, 01:10 PM IST
ರಾಜ್ಯ ಸರ್ಕಾರದಿಂದ ಜನರಿಗೆ ಮತ್ತೊಂದು ಹೊಸ ಭಾಗ್ಯ..!

ಸಾರಾಂಶ

ರಾಜ್ಯ ಸರ್ಕಾರ ಮುಂದಿನ ಬಜೆಟ್‌ನಲ್ಲಿ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಪ್ರತಿವರ್ಷ ಪುರುಷರಿಗೆ ಶರ್ಟ್, ಪಂಚೆ ಹಾಗೂ ಮಹಿಳೆಯರಿಗೆ ಸೀರೆ, ರವಿಕೆ ಕೊಡಲು ‘ಇಂದಿರಾ ವಸ್ತ್ರಭಾಗ್ಯ’ ಯೋಜನೆ ಜಾರಿಗೆ ತರಲು ಗಂಭೀರ ಚಿಂತನೆ ನಡೆಸಿದೆ.

ಬೆಂಗಳೂರು(ಜ.11): ರಾಜ್ಯ ಸರ್ಕಾರ ಮುಂದಿನ ಬಜೆಟ್‌ನಲ್ಲಿ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಪ್ರತಿವರ್ಷ ಪುರುಷರಿಗೆ ಶರ್ಟ್, ಪಂಚೆ ಹಾಗೂ ಮಹಿಳೆಯರಿಗೆ ಸೀರೆ, ರವಿಕೆ ಕೊಡಲು ‘ಇಂದಿರಾ ವಸ್ತ್ರಭಾಗ್ಯ’ ಯೋಜನೆ ಜಾರಿಗೆ ತರಲು ಗಂಭೀರ ಚಿಂತನೆ ನಡೆಸಿದೆ.

ಈ ಕುರಿತು ಜವಳಿ ಖಾತೆ ಸಚಿವ ರುದ್ರಪ್ಪ ಲಮಾಣಿ ಅವರು ಕಳೆದ ವಾರ ಸರ್ಕಾರಕ್ಕೆ ಪ್ರಸ್ತಾವ ಕಳಿಸಿದ್ದಾರೆ. ಒಂದೆಡೆ ಇಂದಿರಾ ವಸ್ತ್ರಭಾಗ್ಯ ಯೋಜನೆಯಡಿ ಬಡವರಿಗೆ ಅನುಕೂಲವಾದರೆ ಮತ್ತೊಂದೆಡೆ ಬಡವರಿಗೆ ನೀಡಲಾಗುವ ಬಟ್ಟೆಗಳನ್ನು ರಾಜ್ಯದ ಸರಿಸುಮಾರು 25 ಸಾವಿರ ನೇಕಾರ ಕುಟುಂಬಗಳಿಂದ ಖರೀದಿಸಿದರೆ ಅವರಿಗೂ ಅನುಕೂಲವಾಗುತ್ತದೆ.

ಇದರಿಂದ ಸರ್ಕಾರ 550 ಕೋಟಿ ರು.ಗಳನ್ನು ವೆಚ್ಚ ಮಾಡಬೇಕಾಗುತ್ತದೆ. ಜವಳಿ ಇಲಾಖೆಯಿಂದ ಈ ವೆಚ್ಚವನ್ನು ಭರಿಸಿ, ರಾಜ್ಯದ ಬಡವರಿಗೆ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿಗಳ ಆಧಾರದ ಮೇಲೆ ನೀಡಬಹುದಾಗಿದೆ ಎಂದು ಪ್ರಸ್ತಾವದಲ್ಲಿ ಕೋರಿದ್ದಾರೆ.

ಏನೇನು ಕೊಡ್ತಾರೆ?: , ಪುರುಷರಿಗೆ 2 ಮೀಟರ್ ಗಾತ್ರದ 150 ರು. ಗಳ ದರದ ಒಂದು ಕಾಟನ್ ಪಂಚೆ ಹಾಗೂ 2 ಮೀಟರ್ ಗಾತ್ರದ 100 ರು. ದರದ ಒಂದು ಪಾಲಿಸ್ಟರ್ ಶರ್ಟ್ ಬಟ್ಟೆ ಸೇರಿದಂತೆ ಒಟ್ಟು 250 ರು. ದರದ ಬಟ್ಟೆ ಕೊಡಲು ಚಿಂತನೆ ನಡೆದಿದೆ. ಇನ್ನು ಮಹಿಳೆಯರಿಗೆ 5.5 ಮೀಟರ್ ಉದ್ದದ 200 ರು. ದರದ ಪಾಲಿಸ್ಟರ್ ಸೀರೆ ಮತ್ತು 0.80 ಮೀ. ಉದ್ದದ 50 ರು. ಮೌಲ್ಯದ ಪಾಲಿ ಮತ್ತು ಕಾಟನ್ ಮಿಶ್ರಿತ ರವಿಕೆ ನೀಡಲಾಗುತ್ತದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ನಾವು ದೇಶಕ್ಕಾಗಿ, ನೀವು ಚುನಾವಣೆಗಾಗಿ: ಬಿಜೆಪಿ. ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ವಾಗ್ದಾಳಿ
ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ