
ಬೆಂಗಳೂರು, (ಜೂನ್.12): ರಾಜ್ಯದ ಸರ್ಕಾರಿ ಕಚೇರಿಗಳಿಗೆ 4ನೇ ಶನಿವಾರ ಸಾರ್ವತ್ರಿಕ ರಜೆ ನೀಡಿ ಕರ್ನಾಟಕ ಸರ್ಕಾರ ಇಂದು (ಬುಧವಾರ) ಅಧಿಕೃತ ಆದೇಶ ಹೊರಡಿಸಿದೆ.
ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಪ್ರತಿ ತಿಂಗಳು 4ನೇ ಶನಿವಾರವನ್ನು ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಎಂದು ಘೋಷಿಸಿದೆ.
ಜಯಂತಿಗಳ ಹಾಲಿಡೇಸ್ ಕೈಬಿಟ್ಟು ಮತ್ತೊಂದು ರಜೆ ಘೋಷಿಸಿದ ಸರ್ಕಾರ
ಪ್ರಸ್ತುತ ರಾಜ್ಯ ಸರ್ಕಾರಿ ನೌಕರರಿಗೆ ಇರುವ ಹದಿನೈದು ದಿವಸಗಳ ಸಾಂದರ್ಭಿಕ ರಜೆಯನ್ನು 10 ದಿವಸಗಳಿಗೆ ಇಳಿಸಲಾಗಿದೆ ಎಂದು ಅಧಿಸೂಚಿಸಿದೆ.
ಈ ಹಿಂದಿನ ಸಚಿವ ಸಂಪುಟದಲ್ಲಿ ನಾಲ್ಕನೇ ಶನಿವಾರ ರಜೆ ನೀಡುವ ಬಗ್ಗೆ ನಿರ್ಧರಿಸಿತ್ತು. ಅದರಂತೆ ಇಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಇನ್ನು ವಾಲ್ಮೀಕಿ ಜಯಂತಿ, ಕನಕ ಜಯಂತಿ, ಬಸವ ಜಯಂತಿ, ಮಹಾವೀರ ಜಯಂತಿ, ಮಹಾಲಯ ಅಮಾವಾಸ್ಯೆ, ಈದ್ವಿುಲಾದ್, ಕಾರ್ವಿುಕ ದಿನ, ಗುಡ್ ಫ್ರೈಡೇ ಹಾಗೂ ಕಾರ್ವಿುಕ ದಿನದ ರಜೆ ಮುಂದುವರೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.