
ಮೈಸೂರು [ಜು.14]: ಸರ್ಕಾರ ಸದ್ಯಕ್ಕೆ ಸುಭದ್ರವಾಗಿದೆ. ಆದರೆ, ಐದು ವರ್ಷ ಇರುತ್ತದೆ ಅಂತ ಹೇಳಲು ಆಗಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಭಯ, ಆತಂಕ ಇದ್ದೇ ಇರುತ್ತದೆ. ಆದರೆ, ಸದ್ಯ ನಮಗೆ ಭಯ ಇಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದದಿಗಾಗಿ ಇಲ್ಲಿ ಕ್ಲಿಕ್ಕಿಸಿ
ವಿಶ್ವಾಸ ಮತಯಾಚನೆ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಇದನ್ನು ರಾಷ್ಟ್ರಕ್ಕೆ ಕೇಳುವ ಹಾಗೆ ಹೇಳಿದ್ದಾರೆ. ಎಂಟಿಬಿ ನಾಗರಾಜ್ ಅವರು ವಾಪಸ್ ಬರುತ್ತಾರೆ ಎಂಬ ವಿಚಾರ ಗೊತ್ತಿಲ್ಲ. ಅದನ್ನು ತಿಳಿದುಕೊಂಡು ಮಾತನಾಡುತ್ತೇನೆ. ಮತ್ತೆ ನಾವು ಮುಂಬೈಗೆ ಹೋಗಬೇಕಾಗಿಲ್ಲ. ಇನ್ಮೇಲೆ ಎಲ್ಲಾ ಇಲ್ಲೆ ನಡೆಯುತ್ತದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.