ಕ್ಯಾನ್ಸರ್‌ ಪೀಡಿತ ಶಿಕ್ಷಕಿಗೂ ವರ್ಗಾವಣೆ ವಿನಾಯಿತಿ ಇಲ್ಲ

Published : Sep 10, 2019, 08:54 AM ISTUpdated : Sep 10, 2019, 08:55 AM IST
ಕ್ಯಾನ್ಸರ್‌ ಪೀಡಿತ ಶಿಕ್ಷಕಿಗೂ ವರ್ಗಾವಣೆ ವಿನಾಯಿತಿ ಇಲ್ಲ

ಸಾರಾಂಶ

ಕ್ಯಾನ್ಸರ್ ಪೀಡಿತ ಶಿಕ್ಷಕಿಗೂ ವರ್ಗಾವಣೆಯಿಂದ ವಿನಾಯಿತಿ ನೀಡಲಾಗಿಲ್ಲ ಎನ್ನುವ ಆರೋಪ ಒಂದು ಇದೀಗ ಕೇಳಿ ಬಂದಿದೆ. ಈ ಬಗ್ಗೆ ಪೋಸ್ಟ್ ಸಾಮಾಝಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

ಬೆಂಗಳೂರು [ಸೆ.10]:  ನಗರದ ಎಳ್ಕುಂಟೆ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹೇಶ್ವರಿ ಎಂಬ ಕ್ಯಾನ್ಸರ್‌ ಪೀಡಿತ ಶಿಕ್ಷಕಿಗೆ ವರ್ಗಾವಣೆಯಿಂದ ವಿನಾಯಿತಿ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಬಸವನಗುಡಿ ಟಿನ್‌ ಶಾಲೆಯಲ್ಲಿ ಸೋಮವಾರ ನಡೆದ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಲು ತಮ್ಮ ಮಗಳ ಜತೆ ಆಗಮಿಸಿದ್ದರು. ತಾಂತ್ರಿಕ ಕಾರಣಗಳ ನೆಪವೊಡ್ಡಿ ಇವರಿಗೆ ವಿನಾಯಿತಿ ನೀಡಿಲ್ಲವೆಂದು ಆರೋಪಿಸಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿಬಿಟ್ಟಿದ್ದಾರೆ. ಸಾಮಾಜಿಕ ತಾಣದ ಸಂದೇಶದಲ್ಲಿ ಶಿಕ್ಷಕಿ ಅವರ ಸಂಪರ್ಕ ಸಂಖ್ಯೆ ನೀಡಲಾಗಿದೆ. ಆದರೆ, ಪ್ರತಿಕ್ರಿಯೆಗಾಗಿ ಶಿಕ್ಷಕರಿಗೆ ಸತತವಾಗಿ ಪ್ರಯತ್ನ ಮಾಡಿದರೂ ಕೂಡ ಕರೆಯನ್ನು ಸ್ವೀಕರಿಸಿಲ್ಲ. ಸದ್ಯ ಮಹೇಶ್ವರಿ ಅವರು ತಮಿಳುನಾಡಿನ ಮಧುರೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಂಗಳೂರು ದಕ್ಷಿಣ ವಲಯ-1ರಲ್ಲಿ ಮಹೇಶ್ವರಿ ಆಗಮಿಸಿದ್ದರು. ಕೆಂಗೇರಿ ಬಳಿಯಲ್ಲಿರುವ ಶಾಲೆಗೆ ವರ್ಗಾವಣೆ ಮಾಡಲಾಗಿದೆ ಎಂದು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಸಿ. ಬಸವರಾಜೇಗೌಡ ತಿಳಿಸಿದ್ದಾರೆ. ವರ್ಗಾವಣೆ ನಿಯಮದ ಪ್ರಕಾರ ಆರೋಗ್ಯದ ಹಿನ್ನೆಲೆಯಲ್ಲಿ ವಿನಾಯಿತಿ ಕೋರುವವರು ವರ್ಗಾವಣೆ ಮೊದಲೇ ವೈದ್ಯರ ತ್ರಿಸದಸ್ಯ ಸಮಿತಿಯಿಂದ ವರದಿ ಪಡೆದು ಸಲ್ಲಿಸಬೇಕು. ಅದು 2019 ವರದಿಯಾಗಿರಬೇಕು. ಆನಂತರ ಪರಿಶೀಲಿಸಿ ರೋಗದ ತೀವ್ರತೆ ನೋಡಿ ವಿನಾಯಿತಿ ನೀಡಲು ಅವಕಾಶವಿದೆ. ಈ ರೀತಿ ಸಲ್ಲಿಸದೇ ಇರುವವರಿಗೆ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೃತ್ತಿಪರತೆ ಅಂತ್ಯಸಂಸ್ಕಾರ, ಪ್ರಶ್ನೆ ಕೇಳಿದ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕಿಸ್ತಾನ ಸೇನಾ ಲೆ.ಜನರಲ್
ರೀಲ್ಸ್‌ ನೋಡಿ ನೋಡಿ, ಗಂಡ ಮಕ್ಕಳ ಬಿಟ್ಟು ಸೋಶಿಯಲ್ ಮೀಡಿಯಾ ಗೆಳೆಯನಿಗಾಗಿ ಬಸ್ ಹತ್ತಿದ ಮಹಿಳೆ