
ಬೆಂಗಳೂರು, [ಆ.19]: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ 22 ಮಂದಿ ಡಿವೈಎಸ್ ಪಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದ ಮೇಲೆ ಮೇಲಿಂದ ಮೇಲೆ ಅಧಿಕಾರಿಗಳ ವರ್ಗಾವಣೆ ನಡೆಯುತ್ತಲೇ ಇದ್ದು, ಇದರ ಕಮಿಷನ್ ದಂಧೆ ನಡೆಯುತ್ತಿದೆ ಎಂದು ಪ್ರತಿ ಪಕ್ಷಗಳು ಗಂಭೀರ ಆರೋಪ ಮಾಡಿವೆ.
ಆದರೂ ಇದ್ಯಾವುದಕ್ಕೂ ಕಿವಿಗೊಡ ಬಿಎಸ್ ವೈ ಸರ್ಕಾರ ಇಂದು [ಸೋಮವಾರ] 22 DYSPಗಳನ್ನು ಎತ್ತಂಗಡಿ ಮಾಡಿದೆ. ಆ ಪಟ್ಟಿ ಈ ಕೆಳಗಿನಂತಿದೆ.
ಶ್ರೀನಿವಾಸ್ ಹೆಚ್, ಸಿದ್ದ ಲಿಂಗಪ್ಪ ಎಸ್ ಟಿ, ಸದಾನಂದ ಎ ತಿಪ್ಪಣ್ಣನವರ್, ಮುರಳಿ ಹೆಚ್ ಎಸ್, ಶಿವಶಂಕರ್ ಎಂ, ಬಶೀರ್ ಅಹ್ಮದ್ ಟಿ, ಪುಟ್ಟಮಾದಯ್ಯ, ಲಕ್ಷ್ಮಣ್ ನಾಯಕ್ ಇವರೆಲ್ಲರನ್ನು ರಾಜ್ಯ ಗುಪ್ತದಳಕ್ಕೆ ವರ್ಗಾವಣೆ ಮಾಡಲಾಗಿದೆ.
ರವಿಪ್ರಸಾದ್ , ನಾಗರಾಜ್ , ಕಾಶಿ ಇವರುಗಳನ್ನು ಸಿಸಿಬಿ ಎಸಿಪಿಗಳಾಗಿ ವರ್ಗಾವಣೆಯಾಗಿದ್ದಾರೆ. ಇನ್ನು ರವೀಂದ್ರ, ಧರ್ಮಪ್ಪ, ಮೊಹಮ್ಮದ್ ಹುಮಾಯೂನ್ , ರಮೇಶ್ ಕೆ ಎನ್ , ವೇಣುಗೋಪಾಲ್, ಮೋಹನ್ ಕುಮಾರ್ ಬಿಎಸ್ ಬಾಲರಾಜ್ ಸಿಐಡಿಗೆ ವರ್ಗಾವಣೆ.
ವರ್ಗಾವಣೆ ದಂಧೆ: ನಮ್ಮ ಸರ್ಕಾರ ವರ್ಗಾವಣೆ ದಂಧೆ ಮಾಡಿದೆ ಎಂದು ಬಿಪಿಯವರು ಹೇಳ್ತಿದ್ರು, ಈಗ ಬಿಜೆಪಿ ಸರ್ಕಾರ ಬಂದ ಮೇಲೆ ಯಲಹಂಕ ತಹಸೀಲ್ದಾರ್ ಪೋಸ್ಟ್ ಗೆ ಎಷ್ಟುವ್ಯವಹಾರ ಆಯ್ತು ಹೇಳಿ? ನಮಗೆ ವರ್ಗಾವಣೆ ಲೂಟಿ ಅಂತೀರಿ. ನೀವೇನು ಮಾಡ್ತಿದ್ದೀರಿ? ವರ್ಗಾವಣೆ ದಂದೆಗೆ ಯಡಿಯೂರಪ್ಪ ಸುಪುತ್ರನನ್ನೇ ಬಿಟ್ಡಿದ್ದಾರೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.