ಶುರುವಾಯ್ತು ವರ್ಗಾವಣೆ ಪರ್ವ: ಗುರುವಾರ 11, ಶುಕ್ರವಾರ 6 IPS ಅಧಿಕಾರಿಗಳ ಎತ್ತಂಗಡಿ

Published : Aug 02, 2019, 07:11 PM ISTUpdated : Aug 02, 2019, 07:18 PM IST
ಶುರುವಾಯ್ತು ವರ್ಗಾವಣೆ ಪರ್ವ:  ಗುರುವಾರ 11, ಶುಕ್ರವಾರ 6 IPS ಅಧಿಕಾರಿಗಳ ಎತ್ತಂಗಡಿ

ಸಾರಾಂಶ

ನಿನ್ನೆ (ಗುರುವಾರ) ಅಷ್ಟೇ 11 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಮತ್ತೆ ಇಂದು (ಶುಕ್ರವಾರ) 6 ಐಪಿಎಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಿದೆ.

ಬೆಂಗಳೂರು (ಆ.02):  ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರಿದಿದೆ. ಆಗಸ್ಟ್ 01ರಂದು 11 ಐಪಿಎಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಿದ್ದ ಬಿಎಸ್‌ವೈ ನೇತೃತ್ವದ ಸರ್ಕಾರ, ಇಂದು (ಶುಕ್ರವಾರ ಮತ್ತೆ 6 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.

ಬೆಂಗ್ಳೂರು ಪೊಲೀಸ್ ಕಮೀಷನರ್ ಅಲೋಕ್ ಕುಮಾರ್ ಎತ್ತಂಗಡಿ

ಪ್ರಮುಖ ಅಂಶ ಅಂದ್ರೆ ಬಿಎಸ್‌ವೈ ಸರ್ಕಾರ ಹೆಚ್ಚು ಪೊಲೀಸ್ ಇಲಾಖೆ ಮೇಲೆ ಕಣ್ನಿಟ್ಟಿದೆ. ಯಾಕಂದ್ರೆ ನಿನ್ನೆ 11 ಇಂದು 6 ಪೊಲೀಸ್ ಅಧಿಕಾರಿಗಳನ್ನೇ ಟ್ರಾನ್ಸ್‌ಫರ್ ಮಾಡಿದೆ. 

ಬೆಳಗ್ಗೆ ಸಭೆ, ಸಂಜೆ ವೇಳೆಗೆ 11 IPS ಅಧಿಕಾರಿಗಳ ದಿಢೀರ್ ಎತ್ತಂಗಡಿ

ಬೆಂಗಳೂರು ಪೊಲೀಸ್ ಕಮೀಷನರ್ ಸೇರಿದಂತೆ ಒಟ್ಟು 6 IPS ಐಪಿಎಸ್ ಅಧಿಕಾರಿಗಳನ್ನು ಟ್ರಾನ್ಸ್‌ಫರ್ ಮಾಡಲಾಗಿದೆ. ಅದರ ಪಟ್ಟಿ ಇಂತಿದೆ.

* ಬೆಂಗಳೂರು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರನ್ನು ರಾಜ್ಯ ಮೀಸಲು ಪೊಲೀಸ್ ಪಡೆಯ (KSRP) ADGPಯಾಗಿ ವರ್ಗಾಯಿಸಿದೆ.

* ಭಾಸ್ಕರ ರಾವ್ ಅವರನ್ನು ಬೆಂಗಳೂರು ಪೊಲೀಸ್ ಆಯುಕ್ತರನ್ನಾಗಿ ಟ್ರಾನ್ಸ್‌ಫರ್ ಮಾಡಲಾಗಿದೆ.

* ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಐಜಿಪಿಯಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ಆಡಳಿತ ವಿಭಾಗದ ಐಜಿಪಿಯನ್ನಾಗಿ ವರ್ಗಾಯಿಸಲಾಗಿದೆ. 

* ಅಗ್ನಿಶಾಮಕದಳದ ಡಿಐಜಿಪಿ ಬಿ.ಆರ್. ರವಿಕಾಂತೇಗೌಡ ಅವರನ್ನು ಬೆಂಗಳೂರು ಪಶ್ಚಿಮ ವಿಭಾಗದ ಜಂಟಿ ಆಯುಕ್ತರನ್ನಾಗಿ ನೇಮಿಸಲಾಗಿದೆ.

* ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ಕುಮಾರ್ ಅವರನ್ನು ಅಗ್ನಿಶಾಮಕ ದಳದ ಐಜಿಪಿಯನ್ನಾಗಿ ವರ್ಗಾಯಿಸಲಾಗಿದೆ. 

* ಡಿ. ದೇವರಾಜು ಅವರನ್ನು ಸಿಐಡಿಯ ಎಸ್‌ಪಿಯನ್ನಾಗಿ, ಅಶ್ವಿನಿ ಅವರನ್ನು ಗುಪ್ತಚರದಳದ ಡಿಸಿಪಿಯಾಗಿ ಮತ್ತು ಆರ್. ಚೇತನ್ ಅವರನ್ನು ಕರಾವಳಿ ಕಾವಲು ಪಡೆಯ ಎಸ್ಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್
ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ