ಪ್ರತ್ಯೇಕತೆ ದೊಣ್ಣೆಯಿಂದ ಪಾರಾಗಲು ಸರ್ಕಾರದ ಮಾಸ್ಟರ್ ಪ್ಲ್ಯಾನ್

Published : Aug 01, 2018, 05:51 PM IST
ಪ್ರತ್ಯೇಕತೆ ದೊಣ್ಣೆಯಿಂದ ಪಾರಾಗಲು ಸರ್ಕಾರದ ಮಾಸ್ಟರ್ ಪ್ಲ್ಯಾನ್

ಸಾರಾಂಶ

ಪ್ರತ್ಯೇಕ ಉತ್ತರಕರ್ನಾಟಕ ಕೂಗಿಗೆ ಬೆದರಿತಾ ಸಮ್ಮಿಶ್ರ ಸರ್ಕಾರ? ಎಂಬ ಅನುಮಾನ ವ್ಯಕ್ತವಾಗಿದೆ. ಕಳೆದ ಎರಡು ದಿನಗಳಲ್ಲಿ ನಡೆದ ಬೆಳವಣಿಗೆಗಳು ಇದಕ್ಕೆ ಮತ್ತಷ್ಟು ಪುಷ್ಠಿ ನೀಡುತ್ತಿವೆ. ಆದರೆ ಹೋರಾಟಗಾರರ ಅಭಿಪ್ರಾಯ ಜನಾಕ್ರೋಶವಾಗದಂತೆ ತಡೆಯಲು ಸರಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ. 

ಬೆಂಗಳೂರು[ಆ.1] ಒಂದು ಕಡೆ ಆಗಸ್ಟ್2 ರಂದು ಕರೆ ನೀಡಿದ್ದ ಬಂದ್ ಹಿಂದಕ್ಕೆ ಪಡೆಯಲಾಗಿದ್ದರೂ ಸಮ್ಮಿಶ್ರ ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆಯಾಗೋದನ್ನು ತಡೆಯಲು ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ಇದಕ್ಕೆ ಪ್ರಾಥಮಿಕ ಹಂತ ಎನ್ನುವಂತೆ ಉತ್ತರಕರ್ನಾಟಕ ಸಮಸ್ಯೆ ಅರಿಯಲು ತಜ್ಞರ ಸಮಿತಿ ರಚನೆ ಮಾಡುವ ಸಾಧ್ಯತೆ ಇದೆ.

ಈ ಬಗ್ಗೆ ಗುರುವಾರ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿಗಂಭೀರ ಚರ್ಚೆ ನಡೆಯಲಿದೆ. ತಜ್ಞರ ಸಮಿತಿಯ ಮೂಲಕ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಸಮಗ್ರ ಚರ್ಚೆ ನಡೆಯಲಿದೆ. ಆದರೆ ತಜ್ಞರ ಸಮಿತಿ ರಚನೆ ಮಾಡಿ ಹೋರಾಟಗಾರರ ಬಾಯಿಮುಚ್ಚಿಸುವ ತಂತ್ರ ರಾಜ್ಯ ಸರಕಾರದಿಂದ ನಡೆಯುತ್ತಿದೆಯೇ ಎಂಬ ಅನುಮಾನ ಸಹ ಮೂಡಿದೆ.

ಬೆಳಗಾವಿಯನ್ನು ಎರಡನೇಯ ರಾಜಧಾನಿಯನ್ನಾಗಿ ಮಾಡುವ ಬಗ್ಗೆಯೂ ಅಧ್ಯಯನ ಮಾಡಲಾಗುಗುತ್ತದೆಯೇ? ಪ್ರಮುಖ ನಿಗಮ ಮಂಡಳಿಗಳನ್ನು ಬೆಳಗಾವಿಯ ಸುವರ್ಣಸೌಧಕ್ಕೆ ವರ್ಗಾಯಿಸುವ ಲೆಕ್ಕಾಚಾರ ಇದೆಯೇ? ಅಥವಾ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಸರಕಾರ ಈ ತಂತ್ರದ ಮೊರೆ ಹೋಗುತ್ತಿದೆಯೇ ಎಂಬುದು ಸದ್ಯಕ್ಕೆ ಅರ್ಥವಾಗಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೊಂಡಿ ಬೀಚ್‌ನಲ್ಲಿ ಯಹೂದಿಯರ ಹಬ್ಬದಲ್ಲಿ ರಕ್ತಪಾತಗೈದ ಹಂತಕ ಭಾರತೀಯ ಮುಸ್ಲಿಂ: ಹೈದರಾಬಾದ್ ಓಲ್ಡ್ ಸಿಟಿಯಿಂದ ವಲಸೆ ಹೋದವ
'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!