
ಬೆಂಗಳೂರು (ಡಿ.13): ಹೊಸ ವರ್ಷಾಚರಣೆ ವೇಳೆ ಮದ್ಯ ನಿಷೇಧ ಸಂಬಂಧ ಸರ್ಕಾರದ ನಿಲುವು ತಿಳಿಸಲು ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.
ಹೊಸ ವರ್ಷಾಚರಣೆ ವೇಳೆ ಮದ್ಯ ನಿಷೇಧ ಕೋರಿ ನಾಗೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹೊಸ ವರ್ಷಾಚರಣೆ ವೇಳೆ ಲೈಂಗಿಕ ದೌರ್ಜನ್ಯ ನಡೆದಿವೆ. ಇದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿಗೆ ಕೆಟ್ಟ ಹೆಸರು ಬರುತ್ತದೆ. ಹೊಸ ವರ್ಷಾಚರಣೆ ಅವಘಡಗಳಿಗೆ ಮದ್ಯಪಾನವೇ ಕಾರಣ. ಹೀಗಾಗಿ ಡಿ.31, ಜ. 1 ರಂದು ಮದ್ಯ ನಿಷೇಧ ಮಾಡಬೇಕೆಂದು ಮನವಿ ಸಲ್ಲಿಸಿದ್ದರು. ನ್ಯಾಯಾಲಯ ವಿಚಾರಣೆಯನ್ನು ಡಿ.15 ಕ್ಕೆ ಮುಂದೂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.