
ಬೆಂಗಳೂರು (ಫೆ.02): ಫೆ. 4ಕ್ಕೆ ಬೆಂಗಳೂರು ಬಂದ್ ಮಾಡುವಂತಿಲ್ಲ. ಬಂದ್ ಆಚರಣೆಗೆ ಕರೆ ನೀಡುವುದು ಸಂವಿಧಾನ ಬಾಹಿರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಬಂದ್'ಗೆ ಕರೆ ನೀಡಿದವರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಬಂದ್ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್ ವಿಭಾಗೀಯ ಪೀಠ ಸಾರಿಗೆ, ವ್ಯಾಪಾರ ಎಂದಿನಂತೆ ನಡೆಯಲು ನೋಡಿಕೊಳ್ಳುವ ಹೊಣೆ ಸರ್ಕಾರದ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟಿದೆ.
ಮಹದಾಯಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳೊಳಗಾಗಿ ಮಧ್ಯ ಪ್ರವೇಶಿಸಿ, ಭರವಸೆ ನೀಡದಿದ್ದರೆ ಫೆ. 04 ರಂದು ಮತ್ತೆ ಬಂದ್ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ಕರೆ ನೀಡದ್ದರು. ಇದನ್ನು ಪ್ರಶ್ನಿಸಿ, ಬಂದ್'ಗೆ ಅವಕಾಶ ನೀಡಬೇಡಿ ಎಂದು ಕೋರಿ ರಾಜಾಜಿನಗರದ ಶ್ರದ್ಧಾ ಪೋಷಕರ ಸಂಘ, ಇತರರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹೆಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ವಿಭಾಗೀಯ ಪೀಠ, ಬಂದ್ ನಡೆಸುವುದು ಅಸಂವಿಧಾನಿಕ. ಬಂದ್'ಗೆ ಕರೆ ನೀಡುವುದು ಮೂಲಭೂತ ಹಕ್ಕಲ್ಲ. ಜನಸಾಮಾನ್ಯರಿಗೆ ತೊಂದರೆ ಮಾಡುವಂತಿಲ್ಲವೆಂದು ಅಭಿಪ್ರಾಯಪಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.