ಅಕ್ರಮ ವರ್ಗಾವಣೆಯಲ್ಲಿ ರಾಜ್ಯ ಸರ್ಕಾರ ಫೇಮಸ್

Published : Dec 12, 2017, 04:23 PM ISTUpdated : Apr 11, 2018, 01:12 PM IST
ಅಕ್ರಮ ವರ್ಗಾವಣೆಯಲ್ಲಿ ರಾಜ್ಯ ಸರ್ಕಾರ ಫೇಮಸ್

ಸಾರಾಂಶ

ಕರ್ನಾಟಕ ಸರ್ಕಾರದಲ್ಲಿ ವೃತ್ತಿಪರವಾದ ಆಡಳಿತ ಇಲ್ಲವಾಗಿದೆ. ನಿಯಮಗಳ ವಿರುದ್ಧವಾಗಿ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡುವುದರಲ್ಲಿ ಸರ್ಕಾರ ತುಂಬಾ ಫೇಮಸ್. ನಿಯಮಾನುಸರ ವರ್ಗಾವಣೆ ಮಾಡುವಂತೆ ಹಲವು ಬಾರಿ ನ್ಯಾಯಾಲಯ ಹೇಳಿದ್ದರೂ ಸರ್ಕಾರ ಮಾತ್ರ ತನ್ನ ತಪ್ಪು ತಿದ್ದಿಕೊಳ್ಳುತ್ತಿಲ್ಲ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು (ಡಿ.12): ಕರ್ನಾಟಕ ಸರ್ಕಾರದಲ್ಲಿ ವೃತ್ತಿಪರವಾದ ಆಡಳಿತ ಇಲ್ಲವಾಗಿದೆ. ನಿಯಮಗಳ ವಿರುದ್ಧವಾಗಿ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡುವುದರಲ್ಲಿ ಸರ್ಕಾರ ತುಂಬಾ ಫೇಮಸ್. ನಿಯಮಾನುಸರ ವರ್ಗಾವಣೆ ಮಾಡುವಂತೆ ಹಲವು ಬಾರಿ ನ್ಯಾಯಾಲಯ ಹೇಳಿದ್ದರೂ ಸರ್ಕಾರ ಮಾತ್ರ ತನ್ನ ತಪ್ಪು ತಿದ್ದಿಕೊಳ್ಳುತ್ತಿಲ್ಲ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕನಕಪುರ ತಾಲೂಕು ದೊಡ್ಡ ಮರಳವಾಡಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) ಆಗಿ ಕೆಲಸ ಮಾಡುತ್ತಿದ್ದ ತಮ್ಮನ್ನು ಅವಧಿಗೆ ಮುನ್ನವೇ ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ವರ್ಗಾವಣೆ ಮಾಡಿದ ಮೇಲೆ ತಮಗೆ ಬೇರೊಂದು ಸ್ಥಳ ತೋರಿಸಿಲ್ಲ ಎಂದು ಆರೋಪಿಸಿ ರಂಗೇಗೌಡ ಎಂಬುವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ. ರಮೇಶ್ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ ಕುಮಾರ್ ಅವರಿದ್ದ ವಿಭಾಗೀಯ ಪೀಠ, ಸರ್ಕಾರವು ಕಾನೂನು ಬಾಹಿರವಾಗಿ ವರ್ಗಾವಣೆ ಮಾಡುತ್ತದೆ. ನಾವೇನೂ ಸುಳ್ಳು ಹೇಳುತ್ತಿಲ್ಲ. ಇದೆಲ್ಲವನ್ನು ನೋಡುತ್ತಿದ್ದರೆ ಸರ್ಕಾರಕ್ಕೆ ಸರಿಯಾಗಿ ಕಾನೂನು ಸಲಹೆ ನೀಡುವವರು ಇಲ್ಲ ಎಂಬುದಾಗಿ ನಮಗೆ ಕಾಣುತ್ತದೆ.

ಅದಕ್ಕೆ ಪದೇ ಪದೇ ನಿಯಮಗಳನ್ನು ಗಾಳಿಗೆ ತೂರಿ ವರ್ಗಾವಣೆ ಮಾಡುತ್ತಲೇ ಇರುತ್ತದೆ. ಇದರಿಂದ ಸರ್ಕಾರದ ಆಡಳಿತದಲ್ಲಿ ವೃತ್ತಿ ಪರತೆ ಇಲ್ಲ ಎಂದು ತೋರುತ್ತದೆ. ಯಾವಾಗಲೂ ಇದೇ ಕಥೆಯಾಗಿದೆ ಎಂದು ಹೇಳಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದಲ್ಲೇ CPR ನೀಡಿ ಅಮೆರಿಕ ಯುವತಿಯ ಪ್ರಾಣ ಉಳಿಸಿದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್
ಪ್ರಧಾನಿ ಮಾಡಿದ್ದೆಲ್ಲಾ ತಪ್ಪು ಅನ್ನೋದು ತಪ್ಪು: ಕೈಗೆ ಮಾಜಿ ಕಾಂಗ್ರೆಸ್ಸಿಗನ ಸಲಹೆ