ಅತ್ತ ರೋಶನ್ , ರಾಮಲಿಂಗಾರೆಡ್ಡಿ ಸ್ಫೋಟ, ಇತ್ತ ಕೈ ಹಿರಿಯ ಸಚಿವರ ನಡುವೆ ಕಿತ್ತಾಟ

Published : Jun 04, 2019, 05:00 PM ISTUpdated : Jun 04, 2019, 05:10 PM IST
ಅತ್ತ ರೋಶನ್ , ರಾಮಲಿಂಗಾರೆಡ್ಡಿ ಸ್ಫೋಟ, ಇತ್ತ ಕೈ ಹಿರಿಯ ಸಚಿವರ ನಡುವೆ ಕಿತ್ತಾಟ

ಸಾರಾಂಶ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್. ವಿಶ್ವನಾಥ್ ರಾಜೀನಾಮೆ ನೀಡಿ ಹೊರನಡೆದಿದ್ದರೆ ಇತ್ತ ಸಚಿವರಿಬ್ಬರ ನಡುವೆಯೇ ವಾರ್ ಶುರುವಾಗಿದೆ. ಉತ್ತರ ಕರ್ನಾಟಕ ಭಾಗದ ಇಬ್ಬರು ನಾಯಕರ  ನಡುವೆ ಮಾತಿನ ಸಮರ ನಡೆದಿದೆ.

ವಿಜಯಪುರ(ಜೂ. 04) ರಾಜ್ಯ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಶಾಸಕರಾದ ರೋಶನ್ ಬೇಗ್ ಮತ್ತು ರಾಮಲಿಂಗಾರೆಡ್ಡಿ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರೆ ಅತ್ತ ವಿಜಯಪುರದಲ್ಲಿ ಸಚಿವರಿಬ್ಬರ ನಡುವೆಯೇ ವಾರ್ ಶುರುವಾಗಿದೆ.

ಗೃಹ ಸಚಿವ  ಎಂ.ಬಿ ಪಾಟೀಲ್ ಮತ್ತು ಆರೋಗ್ಯ ಸಚಿವ ಶಿವಾನಂದ್ ಪಾಟೀಲ್ ನಡುವೆ ಕೋಲ್ಡ್ ವಾರ್ ಶುರುವಾಗಿದೆ. ಸಚಿವ ಎಂ.ಬಿ ಪಾಟೀಲ್ ಹಾಗೂ ಶಿವಾನಂದ ಪಾಟೀಲ್ ನಡುವೆ ಮಾತಿನ ಸಮರ ಶುರುವಾಗಿದೆ.

ಆರೋಗ್ಯ ಸಚಿವ ಶಿವಾನಂದ ಪಾಟೀಲ ವಿರುದ್ಧ ಗರಂ ಆಗಿರುವ ಎಂಬಿ ಪಾಟೀಲ್, ಆಲಮಟ್ಟಿ ಡ್ಯಾಂ ನೀರು ಎಂಬಿಪಿ ಖಾಲಿ ಮಾಡಿದ್ದಾರೆ ಎಂದು ಹೇಳುತ್ತಾರೆ. ಅವರಿಗೆ ಹೊಟ್ಟೆ ಉರಿ ಜಾಸ್ತಿ ಇದೆ.  ಶಿವಾನಂದ ಪಾಟೀಲ ಕೊಳಕು ಮಾತನಾಡುತ್ತಾರೆ. ನಮ್ಮ ಪಕ್ಷದ ಸಚಿವರಾಗಿ ಏನು ತಿಳಿದುಕೊಳ್ಳದೆ ಮಾತನಾಡುವುದು ಸರಿಯಲ್ಲ ಎಂದು ವಿಜಯಪುರದಲ್ಲಿ ವಾಗ್ದಾಳಿ ಮಾಡಿದ್ದಾರೆ.

‘ಲಕ್ಷಣ ರೇಖೆ ದಾಟಿದವರನ್ನು ಪಕ್ಷ ನೋಡಿಕೊಳ್ಳುತ್ತದೆ’

ಇಷ್ಟೊಂದು ನೀರಾವರಿ ಕಾಮಗಾರಿಗೆ ಶ್ರಮ ವಹಿಸಿರುವ ನನಗೆ ಗೌರವ ನೀಡಬೇಕು. ಅದನ್ನು ಬಿಟ್ಟು ಈ ರೀತಿಯ ಹೇಳಿಕೆ ನೀಡುವುದು ಸರಿ ಅಲ್ಲ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಮನಕ್ಕೆ ಎಲ್ಲ ವಿಚಾರಗಳನ್ನು ತಂದಿದ್ದೇನೆ ಎಂದು ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?
ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?