ವಿಮಾನದಲ್ಲಿ ಕನ್ನಡದಲ್ಲಿ ಸೇವೆ ನೀಡದ್ದಕ್ಕೆ IAS ಅಧಿಕಾರಿ ಆಕ್ರೋಶ

Kannadaprabha News   | Asianet News
Published : Dec 17, 2020, 12:36 PM ISTUpdated : Dec 17, 2020, 08:41 PM IST
ವಿಮಾನದಲ್ಲಿ ಕನ್ನಡದಲ್ಲಿ ಸೇವೆ ನೀಡದ್ದಕ್ಕೆ IAS ಅಧಿಕಾರಿ ಆಕ್ರೋಶ

ಸಾರಾಂಶ

ನಮ್ಮ ರಾಜ್ಯದಲ್ಲೇ ಕನ್ನಡ ಕಡೆಗಣನೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇದಕ್ಕೆ ಮತ್ತೊಂದು ನಿದರ್ಶನ ಎನ್ನುವಂತೆ ಐಎಎಸ್‌ ಅಧಿಕಾರಿ ಎಲ್‌.ಕೆ.ಅತೀಕ್‌ ವಿಮಾನಯಾನದ ವೇಳೆ ತಮಗೆದುರಾದ ಕನ್ನಡ ಕಡಗಣನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದ ನೋಡಿ.

ಬೆಳಗಾವಿ(ಡಿ.17): ಕನ್ನಡದಲ್ಲಿ ಸೇವೆ ನೀಡದ ವಿಮಾನಯಾನ ಸಂಸ್ಥೆಗಳ ವಿರುದ್ಧ ಹಿರಿಯ ಐಎಎಸ್‌ ಅಧಿಕಾರಿ ಎಲ್‌.ಕೆ.ಅತೀಕ್‌ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

"

ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ವೀಕ್ಷಕರಾಗಿರುವ ಐಎಎಸ್‌ ಅಧಿಕಾರಿ ಎಲ್‌.ಕೆ.ಅತೀಕ್‌ ಅವರು ಬುಧವಾರ ಬೆಂಗಳೂರಿನಿಂದ ಬೆಳಗಾವಿಗೆ ಇಂಡಿಗೋ ಏರ್‌ಲೈನ್ಸ್‌ ವಿಮಾನದ ಮೂಲಕ ಆಗಮಿಸಿದ್ದರು. ಈ ವೇಳೆ ಐಎಎಸ್‌ ಅಧಿಕಾರಿ ಕನ್ನಡದಲ್ಲಿ ಮಾಹಿತಿ ಬಯಸಿದ್ದರೂ ಏರ್‌ಲೈನ್ಸ್‌ ಸಂಸ್ಥೆಯ ಸಿಬ್ಬಂದಿ ಕನ್ನಡದಲ್ಲಿ ಮಾಹಿತಿ ನೀಡಲಿಲ್ಲ. ಇದರಿಂದ ಕೆರಳಿದ ಅತೀಕ್‌ ಅವರು ವಿಮಾನಯಾನ ಸಂಸ್ಥೆಗಳ ವಿರುದ್ಧ ಟ್ವೀಟರ್‌ನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಂಗಾಪುರ ಏರ್‌ಲೈನ್ಸ್‌ನಲ್ಲೂ ಕನ್ನಡ; ದೇಶಿಯ ವಿಮಾನಗಳಲ್ಲೇಕಿಲ್ಲ?

ವಿದೇಶಿ ವಿಮಾನಯಾನ ಸಂಸ್ಥೆಗಳೇ ಕನ್ನಡದಲ್ಲಿ ಸೇವೆ ನೀಡುತ್ತಿವೆ. ಕರ್ನಾಟಕದಲ್ಲಿ ಇಂಡಿಗೋ ಹಾಗೂ ಇತರೆ ವಿಮಾನಯಾನ ಕಂಪನಿಗಳಿಗೆ ಕನ್ನಡದಲ್ಲಿ ಸೇವೆ ಸಲ್ಲಿಸಲು ಇರುವಂತಹ ಸಮಸ್ಯೆಯಾದರೂ ಏನು ಎಂದು ಟ್ವೀಟ್‌ ಮಾಡುವ ಮೂಲಕ ಪ್ರಶ್ನಿಸಿದ್ದಾರೆ.

ವಿದೇಶಿ ವಿಮಾನಯಾನ ಸಂಸ್ಥೆಗಳಾದ ಬ್ರಿಟಿಷ್‌ ಏರ್‌ವೇಸ್‌ ಎಮಿರೇಟ್ಸ್‌, ಸಿಂಗಾಪುರ್‌ ಏರ್‌ಲೈನ್ಸ್‌ಗಳು ಕನ್ನಡದಲ್ಲಿ ಸೇವೆ ನೀಡುತ್ತಿವೆ. ಆದರೆ, ಇಂಡಿಗೋ ಸಿಬ್ಬಂದಿಗೆ ಕನ್ನಡದಲ್ಲಿ ಸೇವೆ ಮಾಡಲು ಇರುವ ಕಷ್ಟವಾದರೂ ಏನು ಎಂದು ಐಎಎಸ್‌ ಅಧಿಕಾರಿ ಅತೀಕ್‌ ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು