
ಬೆಂಗಳೂರು(ಸೆ.16): ರಾಜ್ಯದ ಐಜಿ ಡಿ. ರೂಪಾ ಅವರಿಗೆ ರಾಷ್ಟ್ರಪತಿಗಳ ಪದಕ ನೀಡಿ ಗೌರವಿಸಲಾಯಿತು. ರಾಜಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ಆರ್. ವಾಲಾ ಅವರು ರೂಪಾ ಅವರಿಗೆ ರಾಷ್ಟ್ರಪತಿಗಳ ಪದಕ ನೀಡಿ ಗೌರವಿಸಿದರು.
ಕೆಲವು ದಿನಗಳ ಹಿಂದಷ್ಟೆ ಐಎಡಿಎಂಕೆಯ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರದಲ್ಲಿ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಿ ಡಿಜಿಪಿ ಅವರಿಗೆ ದೂರು ನೀಡಿ ರಾಜ್ಯದಾದ್ಯಂತ ಸುದ್ದಿಯಾಗಿದ್ದರು.
ಸರ್ಕಾರ ಆರೋಪ ಮಾಡಿದ್ದ ಸತ್ಯನಾರಾಯಣ್ ರಾವ್ ಅವರನ್ನು ಕಡ್ಡಾಯ ರಜೆ ಹಾಗೂ ಡಿ. ರೂಪಾ ಅವರನ್ನು ಸಂಚಾರಿ ವಿಭಾಗದ ಆಯುಕ್ತರನ್ನಾಗಿ ವರ್ಗಾವಣೆ ಮಾಡಿತ್ತು. ಮೂಲತಃ ದಾವಣಗೆರೆಯವರಾದ ರೂಪಾ 2000ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 43ನೇ ರಾಂಕ್ ಪಡೆದು ತೇರ್ಗಡೆಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.