
ಬೆಂಗಳೂರು(ಆ.19): ತಂತ್ರಜ್ಞಾನ ಕ್ಷೇತ್ರದಲ್ಲಿ ಮಾತ್ರವಲ್ಲ, ಕೃಷಿ ಆಧಾರಿತ ಕೈಗಾರಿಕಾ ರಂಗದ ಪ್ರಗತಿಯಲ್ಲೂ ಕರ್ನಾಟಕ ಗಣನೀಯ ಸಾಧನೆ ಮಾಡಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಸಚಿವೆ ಹರ್ಸಿಮ್ರತ್ ಕೌರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯವು ಭಾರತೀಯ ಕೈಗಾರಿಕಾ ಒಕ್ಕೂಟದ ಸಹಯೋಗದಲ್ಲಿ ಇದೇ ನವೆಂಬರ್'ನಲ್ಲಿ ದೆಹಲಿಯಲ್ಲಿ ಹಮ್ಮಿಕೊಂಡಿರುವ ‘ವರ್ಲ್ಡ್ ಫುಡ್ ಇಂಡಿಯಾ- 2017’ ಮೇಳಕ್ಕೆ ಪ್ರಚಾರರ್ಥವಾಗಿ ಶುಕ್ರವಾರ ನಡೆದ ರೋಡ್ ಶೋದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಾವು ಈವರೆಗೆ ಕೃಷಿ ರಂಗದ ಸಾ‘ಕ ರಾಜ್ಯ ಯಾವುದೆಂದರೆ ಮೊದಲು ಪಂಜಾಬ್ ಎನ್ನುತ್ತಿದ್ದೆವು.
ಆದರೆ, ಈಗ ಆ ಆಲೋಚನೆ ಬದಲಾಗಿದ್ದು, ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಪಂಜಾಬ್ ಅನ್ನು ಮೀರಿಸುವಂತೆ ಕರ್ನಾಟಕವು ಮುನ್ನುಗ್ಗಿ ಸಾಗುತ್ತಿದೆ ಎಂದು ಪ್ರಶಂಸಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.