ಕರ್ನಾಟಕ ಉಮಾಭಾರತಿಯದಲ್ಲ; ಇದು ಗೌರಿ ಲಂಕೇಶ್ ಕರ್ನಾಟಕ

Published : Dec 29, 2017, 08:01 PM ISTUpdated : Apr 11, 2018, 12:54 PM IST
ಕರ್ನಾಟಕ ಉಮಾಭಾರತಿಯದಲ್ಲ; ಇದು ಗೌರಿ ಲಂಕೇಶ್ ಕರ್ನಾಟಕ

ಸಾರಾಂಶ

ಕೋಮು ಸೌಹಾರ್ದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮೇವಾನಿ, ಕೋಮುವಾದಿಗಳು ಕರ್ನಾಟಕವನ್ನು ಗುಜರಾತ್ ಮಾಡಲು ಹೊರಟಿದ್ದಾರೆ. ನಾವು ಇದನ್ನು ಗುಜರಾತ್ ಮಾಡಲು ಬಿಡುವುದಿಲ್ಲ. ಬಾಬಾ ಬುಡನ್'ಗಿರಿಯಲ್ಲಿ ಹಿಂದು-ಮುಸ್ಲಿಂ ಒಟ್ಟಾಗಿ ತಪಸ್ಸು ಮಾಡಲು ಪ್ರಯತ್ನಿಸುತ್ತಿದ್ದೇವೆ. ಈ ಸಂದೇಶವನ್ನು ಗುಜರಾತಿಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಮೇವಾನಿ ಹೇಳಿದ್ದಾರೆ.

ಚಿಕ್ಕಮಗಳೂರು(ಡಿ.29): ಕರ್ನಾಟಕ ಕೋಮುಸೌಹಾರ್ದತೆಯಿಂದ ಕೂಡಿದ್ದ ನಾಡಾಗಿದ್ದು, ಇದು ಉಮಾಭಾರತಿಯ ನಾಡಲ್ಲ, ಬದಲಾಗಿ ಇದು ಗೌರಿ ಲಂಕೇಶ್ ಕರ್ನಾಟಕ ಎಂದು ದಲಿತ ಚಳುವಳಿ ಹೋರಾಟಗಾರ ಹಾಗೂ ನೂತನವಾಗಿ ಗುಜರಾತ್ ಶಾಸಕರಾಗಿ ಆಯ್ಕೆಯಾಗಿರುವ ಜಿಗ್ನೇಶ್ ಮೇವಾನಿ ಹೇಳಿದ್ದಾರೆ.

ಕೋಮು ಸೌಹಾರ್ದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮೇವಾನಿ, ಕೋಮುವಾದಿಗಳು ಕರ್ನಾಟಕವನ್ನು ಗುಜರಾತ್ ಮಾಡಲು ಹೊರಟಿದ್ದಾರೆ. ನಾವು ಇದನ್ನು ಗುಜರಾತ್ ಮಾಡಲು ಬಿಡುವುದಿಲ್ಲ. ಬಾಬಾ ಬುಡನ್'ಗಿರಿಯಲ್ಲಿ ಹಿಂದು-ಮುಸ್ಲಿಂ ಒಟ್ಟಾಗಿ ತಪಸ್ಸು ಮಾಡಲು ಪ್ರಯತ್ನಿಸುತ್ತಿದ್ದೇವೆ. ಈ ಸಂದೇಶವನ್ನು ಗುಜರಾತಿಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಮೇವಾನಿ ಹೇಳಿದ್ದಾರೆ.

ಮೋದಿ ಮುದುಕರಾಗಿದ್ದಾರೆ. ಬರೀ ಸುಳ್ಳು ಭರವಸೆ ನೀಡುತ್ತಾರೆ. ನಾವು ಅವರ ಮಾತನ್ನು ಕೇಳೋದು ಬೇಡ. ಬದಲಾಗಿ ನಾವು ಕನ್ಹಯ್ಯಾ ಕುಮಾರ್ ಸೇರಿದಂತೆ ಹಲವಾರು ಹೋರಾಟಗಾರರ ಮಾತು ಕೇಳೋಣ ಎಂದು ಕರೆ ನೀಡಿದ ಅವರು, ಕೋಮುವಾದಿಗಳು ತಮ್ಮ ವಾಂತಿಯಿಂದ ಕರ್ನಾಟಕವನ್ನು ಗಲೀಜು ಮಾಡುತ್ತಿದ್ದಾರೆ, ನಾವು ಅವರಿಗೆ ಸರಿಯಾದ ಉತ್ತರ ಕೊಡಬೇಕಿದೆ ಎಂದು ಕರೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!