ಕಲಾಪಕ್ಕೆ ನಿರ್ಬಂಧ, ಪ್ರತಿಭಟನೆಗೆ ಇಳಿಯಲಿದ್ದಾರೆ ಪತ್ರಕರ್ತರು

Published : Oct 10, 2019, 10:14 PM ISTUpdated : Oct 10, 2019, 10:21 PM IST
ಕಲಾಪಕ್ಕೆ ನಿರ್ಬಂಧ, ಪ್ರತಿಭಟನೆಗೆ ಇಳಿಯಲಿದ್ದಾರೆ ಪತ್ರಕರ್ತರು

ಸಾರಾಂಶ

ಕಲಾಪಕ್ಕೆ ಕ್ಯಾಮರಾ, ಮೊಬೈಲ್ ಒಯ್ಯಂಗಿಲ್ಲ..ಮಾಧ್ಯಮಗಳು ಮಾತೇ ಎತ್ತಂಗಿಲ್ಲ!/ ಸ್ಪೀಕರ್ ಆದೇಶ ಖಂಡಿಸಿ ಪತ್ರಕರ್ತರ ಪ್ರತಿಭಟನೆ/ ಗಾಂಧಿ ಪ್ರತಿಮೆ ಎದುರು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಧರಣಿ

ಬೆಂಗಳೂರು[ಅ. 10]  ವಿಧಾನಸೌಧದ ಕಾರ್ಯಕಲಾಪ ವರದಿಗೆ ಮಾಧ್ಯಮಗಳಿಗೆ ಹೇರಿರುವ ನಿರ್ಬಂಧ ವಿರೋಧಿಸಿ ಪತ್ರಕರ್ತರು ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ. ಬೆಂಗಳೂರಿನ  ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದ್ದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹಿಂಪಡೆಯಬೇಕು ಎಂದು ಒತ್ತಾಯ ಮಾಡಲಿದ್ದಾರೆ. 

ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಬೆಳಗ್ಗೆ 9 ಗಂಟೆಗೆ ಪತ್ರಕರ್ತರು ಸಮಾವೇಶಗೊಳ್ಳಿದ್ದಾರೆ. ಟಿವಿ ಮತ್ತು ಮುದ್ರಣ ಮಾಧ್ಯಮದ ಸಂಪಾದಕರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಪ್ರೆಸ್ ಕ್ಲಬ್ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಕಲಾಪಕ್ಕೆ ಕ್ಯಾಮರಾ, ಮೊಬೈಲ್ ಒಯ್ಯಂಗಿಲ್ಲ..ಮಾಧ್ಯಮಗಳು ಮಾತೇ ಎತ್ತಂಗಿಲ್ಲ!

ಪತ್ರಕರ್ತರಾದ ಆನಂದ್ ಪಿ.ಬೈದನಮನೆ, ಎಚ್‌.ವಿ.ಕಿರಣ್, ಸದಾಶಿವ ಶೆಣೈ ಸೇರಿದಂತೆ ಎಲ್ಲ ಖಾಸಗಿ ಟಿವಿ ಮತ್ತು ಮುದ್ರಣ ಮಾಧ್ಯಮದ ಪ್ರತಿನಿಧಿಗಳು ಆದೇಶ ಹಿಂಪಡೆಯಲು ಒತ್ತಾಯಿಸಲಿದ್ದಾರೆ.

ವಿಧಾನಸಭಾ ಕಲಾಪವನ್ನು ಚಿತ್ರೀಕರಿಸುವ ಸಂಬಂಧ ಖಾಸಗಿ ಮಾಧ್ಯಮಗಳಿಗೆ ರಾಜ್ಯ ಸರ್ಕಾರ ಭಾಗಶಃ ನಿರ್ಬಂಧ ಹಾಕಿದೆ.  ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಆದೇಶದನ್ವಯ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅಧಿಕೃತ ಪ್ರಕಟಣೆ ಹೊರಡಿಸಿದ್ದು ದೂರದರ್ಶನ ನೀಡುವ ವಿಡಿಯೋಗಳನ್ನು ಖಾಸಗಿ ಟಿವಿ ಮಾಧ್ಯಮಗಳು ಪಡೆದುಕೊಳ್ಳಬೇಕು. ವಾರ್ತಾ ಇಲಾಖೆ ನೀಡುವ ಪೋಟೋಗಳನ್ನು  ಮುದ್ರಣ ಮಾಧ್ಯಮದವರು ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿತ್ತು. ಜತೆಗೆ ವರದಿಗಾರರು ವಿಧಾನಸೌಧಕ್ಕೆ ಮೊಬೈಲ್,ಲ್ಯಾಪ್  ಟಾಪ್ ತರುವಂತೆಯೂ ಇಲ್ಲ ಎಂದು ಹೇಳಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾದು ಕಾದು ಸುಸ್ತಾದ ಶೆಹಬಾಜ್‌ ಷರೀಫ್‌, ಟರ್ಕಿ ಅಧ್ಯಕ್ಷರ ಜೊತೆ ಪುಟಿನ್‌ ಮೀಟಿಂಗ್‌ ವೇಳೆ ಒಳನುಗ್ಗಿದ ಪಾಕ್‌ ಪ್ರಧಾನಿ!
ಬೆಂಗಳೂರಿನಲ್ಲಿ ಇಷ್ಟೊಂದು ಚಳಿಗೆ ಕಾರಣವೇನು? ಮುಂದಿನ ಮೂರು ದಿನ ಉತ್ತರ ಕರ್ನಾಟಕದಲ್ಲಿ ಶೀತಗಾಳಿ!