ಈಶ್ವರಪ್ಪ ರಾಜೀನಾಮೆ ಕೊಟ್ಟ ಹುದ್ದೆಗೆ ಬಿಜೆಪಿಯಲ್ಲಿ ರೇಸ್

Published : Jun 20, 2018, 06:10 PM ISTUpdated : Jun 20, 2018, 06:13 PM IST
ಈಶ್ವರಪ್ಪ ರಾಜೀನಾಮೆ ಕೊಟ್ಟ ಹುದ್ದೆಗೆ ಬಿಜೆಪಿಯಲ್ಲಿ ರೇಸ್

ಸಾರಾಂಶ

ಇಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೂ ಪೈಪೋಟಿ ಆರಂಭವಾಗಿದೆ. ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರಕ್ಕೆ ಪಕ್ಷದ ನಾಯಕರಲ್ಲೇ ಹೋರಾಟ ಶುರುವಾಗಿದೆ.

ಬೆಂಗಳೂರು ಜೂನ್ 20:  ಇಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೂ ಪೈಪೋಟಿ ಆರಂಭವಾಗಿದೆ. ರಾಜೀನಾಮೆಯಿಂದ ತೆರವಾಗಿರುವ ಕ್ಷೇತ್ರಕ್ಕೆ ಪಕ್ಷದ ನಾಯಕರಲ್ಲೇ ಹೋರಾಟ ಶುರುವಾಗಿದೆ.

ರಾಜ್ಯದ ವಿಧಾನಪರಿಷತ್ನಲ್ಲಿ ಮತ್ತೆ ವಿರೋಧ ಪಕ್ಷದಲ್ಲೇ ಮುಂದುವರಿಯಲಿರುವ ಬಿಜೆಪಿಯಲ್ಲಿ ಪಕ್ಷದ ನಾಯಕನ ಆಯ್ಕೆಗೆ ರೇಸ್ ಶುರುವಾಗಿದೆ. ಶಾಸಕರಾಗಿ ಕೆ.ಎಸ್.ಈಶ್ವರಪ್ಪ ಆಯ್ಕೆಯಾಗಿದ್ದರಿಂದ ಅವರು ರಾಜೀನಾಮೆ ನೀಡಿದ್ದು ನಾಯಕನ ಆಯ್ಕೆಗೆ ಬಿಜೆಪಿಯಲ್ಲಿ ಪೈಪೋಟಿ ಹೆಚ್ಚಿದೆ. 

ಕೋರ್ ಕಮಿಟಿ ಸಭೆಯಲ್ಲೇ ಅಂತಿಮ ತಿರ್ಮಾನ ಮಾಡಲು ಬಿಜೆಪಿ ಮುಂದಾಗಿದೆ. ಕೋಟಾ ಶ್ರೀನಿವಾಸ್ ಪೂಜಾರಿ, ಕೆ.ಬಿ.ಶಾಣಪ್ಪ, ಆಯನೂರು ಮಂಜುನಾಥ್ ರೇಸ್​ ನಲ್ಲಿದ್ದಾರೆ. ಜತೆಗೆ  ಪ್ರತಿಪಕ್ಷ ನಾಯಕನಾಗಲು ರಘುನಾಥ್ ರಾವ್ ಮಲ್ಕಾಪುರೆ ಅವರೂ ಲಾಬಿ ನಡೆಸಿದ್ದಾರೆ. 

ಕೋಟಾ ಶ್ರೀನಿವಾಸ್ ಪೂಜಾರಿ, ರಘುನಾಥ್ ರಾವ್ ಮಲ್ಕಾಪುರೆ ಮಧ್ಯೆ ಪೈಪೋಟಿಯಿದ್ದು ಬಿಜೆಪಿ ನಾಯಕರು ಕೋರ್ ಕಮಿಟಿ ಸಭೆ ನಡೆಸಿಯೇ ತೀರ್ಮಾನ ತೆಗೆದುಕೊಳ್ಳಲು ಮುಂದಾಗಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Viral Video: ಮಾಜಿ ಸಿಜೆಐ ಬಿಆರ್‌ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್‌ ಕಿಶೋರ್‌ಗೆ ಕೋರ್ಟ್‌ನಲ್ಲೇ ಚಪ್ಪಲಿಯಿಂದ ಹಲ್ಲೆ!
ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಕೋಕಾ ಕೋಲಾ ಕಂಪನಿ ಚಾರ್ಟೆಡ್ ಅಕೌಂಟೆಂಟ್ ಹಠಾತ್ ಸಾವು