
ಕಲಬುರಗಿ [ಜು.09] : ರಾಜ್ಯ ರಾಜಕಾರಣದಲ್ಲಿ ಹೈ ಡ್ರಾಮಾ ಮುಂದುವರಿದಿದೆ. ಹಲವರು ರಾಜೀನಾಮೆ ನೀಡಿದ್ದು, ಮಧ್ಯಂತರ ಚುನಾವಣೆ ನಡೆಯುವ ವಾತಾವರಣವಿದೆ ಎಂದು ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು ಕಲೆ ದಿನಗಳ ಹಿಂದಷ್ಟೇ ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ಮತ್ತೊಂದು ಚುನಾವಣೆಯನ್ನು ಜನರ ಮೇಲೆ ಹೇರುವುದು ಬೇಡ. ಈ ನಿಟ್ಟಿನಲ್ಲಿ ಯಾರಾದರು ಬೆಂಬಲ ನೀಡಿದರೆ ಮಾತ್ರ ಸರ್ಕಾರ ರಚನೆ ಮಾಡೋಣ ಎಂದು ನಮ್ಮ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ ಎಂದರು.
ಇನ್ನು ರಾಜ್ಯ ರಾಜಕೀಯದ ಮುಂದಿನ ಬೆಳವಣಿಗೆ ಬಗ್ಗೆ ಕಾದು ನೋಡೋಣ ಎಂದ ಅವರು ಜೆಡಿಎಸ್, ಕಾಂಗ್ರೆಸ್ ಶಾಸಕರ ರಾಜೀನಾಮೆಗೂ ಕಾದು ನೋಡೋಣ ಏನಾಗುತ್ತೆ ಎಂದ ಮಾಲೀಕಯ್ಯ ಗುತ್ತೇದಾರ್
ಜೆಡಿಎಸ್ ಕಾಂಗ್ರೆಸ್ ಶಾಸಕರ ರಾಜೀನಾಮೆಗೂ, ಬಿಜೆಪಿಗೂ ಸಂಬಂಧವಿಲ್ಲ. ಸರ್ಕಾರ ಬಹುಮತ ಕಳೆದುಕೊಂಡಿದ್ದು ಸಿಎಂ ಸ್ಥಾನಕ್ಕೆ ಹೆಚ್ಡಿಕೆ ರಾಜೀನಾಮೆ ನೀಡಲಿ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.